ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಕೆರೆಗಳನ್ನು ಶುದ್ಧೀಕರಿಸಿ ಸಂರಕ್ಷಣೆಗೆ ಮುಂದಾಗದ ಜನಪ್ರತಿನಿಧಿಗಳು, ಅಧಿಕಾರಿಗಳು: ಆ.15ರ ಸ್ವಾತಂತ್ರ್ಯ ದಿನಾಚರಣೆ‌ ದಿನದಂದು  ಕಪ್ಪುಬಾವುಟ ಹಾರಿಸಲು ತೀರ್ಮಾನ

ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಒಡಲು ಸೇರಿ ಸಂಪೂರ್ಣ ಕಲುಷಿತಗೊಂಡಿವೆ.

ಈ ಕೆರೆಗಳ ನೀರನ್ನು ಬಳಿಸಿದ ಜನ ರೋಗಪೀಡಿತರಾಗುತ್ತಿದ್ದಾರೆ. ಪ್ರಾಣಿ ಪಕ್ಷಿಗಳು, ಜಲಚರಗಳು ಸಾವನ್ನಪ್ಪುತ್ತಿವೆ. ಆದ್ದರಿಂದ ಕೆರೆ ಸಂರಕ್ಷಣೆಗೆ, ಶುದ್ಧೀಕರಣಕ್ಕೆ ಈಗಾಗಲೇ ಹಲವು ಮನವಿ, ಹೋರಾಟ, ಪ್ರತಿಭಟನೆ ಸೇರಿದಂತೆ ನಾನಾ ಪ್ರಯತ್ನ ಮಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ. ಆದರೆ ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ಪಟ್ಟು ಬಿಡದೇ ಕೆರೆ ಶುದ್ದೀಕರಣ, ಸಂರಕ್ಷಣೆಗೆ ಹೋರಾಟ ಮುಂದುವರಿಸಿದ್ದಾರೆ.

ನಿರ್ಲಕ್ಷ್ಯವಹಿಸುತ್ತಿರುವ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ನಡೆ ಖಂಡಿಸಿ ಆ.15ರ ಸ್ವಾತಂತ್ರ್ಯ ದಿನಾಚರಣೆ‌ ದಿನದಂದು ಎಲ್ಲಾ ಗ್ರಾಮಗಳಲ್ಲಿ ಕಪ್ಪುಬಾವುಟ ಹಾರಿಸಲಾಗುವುದು. ಕಪ್ಪು ಬಾವುಟ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಮಾಡಲು ಗ್ರಾಮಸ್ಥರು ಮತ್ತು ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಸಮಿತಿ ಮುಖಂಡರು ತೀರ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಅರ್ಕಾವತಿ ನದಿ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವೈದ್ಯ ಡಾ.ಎಚ್.ಅಂಜಿನಪ್ಪ ಮಾತನಾಡಿ, 10 ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದರು ನಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ, ಶುದ್ಧ ಕುಡಿಯುವ ನೀರು ಕೊಟ್ಟಿಲ್ಲ. ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಭರವಸೆಯಲ್ಲೇ ಕಾಲಕಳೆದಿದ್ದಾರೆ. ಯಾವ ಭರವಸೆಯು ಕಾರ್ಯರೂಪಕ್ಕೆ ಬಂದಿಲ್ಲ. ನಮ್ಮ ಭಾಗದ ಎಲ್ಲಾ ಕೆರೆಗಳು ಸಂಪೂರ್ಣ ಕಲುಷಿತಗೊಂಡಿವೆ. ಕೊಳವೆ ಬಾವಿಗಳಲ್ಲಿ ಬರುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ. ಶೀಘ್ರವಾಗಿ ಇದಕ್ಕೆ ಕಾರಣವಾಗಿರುವವರ ಸೂಕ್ತ ಕಾನೂನು ಕ್ರಮ ಕೈಗೊಂಡು ಕೆರೆಗಳ ಶುದ್ದೀಕರಣ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಕೆರೆ ಅಂಚಿನಲ್ಲಿ ವಾಸವಾಗಿರುವ ಎಲ್ಲಾ ಕುಟುಂಬಗಳು ಕೂಲಿ ಮಾಡಿಕೊಂಡು ಜೀವನ ನಡೆಸುವ ಹಿಂದುಳಿದ ವರ್ಗಕ್ಕೆ ಸೇರಿದವರು. ಪ್ರತಿ ಮನೆಯಲ್ಲೂ ಚರ್ಮ ರೋಗಗಳಿಂದ ಬಳಲುತ್ತಿರುವ ಮಕ್ಕಳು ಇದ್ದಾರೆ. ಹಿರಿಯರು ಉಸಿರಾಟದ ತೊಂದರೆ, ಕೈ, ಕಾಲುಗಳ ನೋವುಗಳಿಂದ ಬಳಲುತ್ತಿದ್ದಾರೆ. ನಮಗೆ ಶುದ್ದ ಕುಡಿಯುವ ನೀರು ಕೊಡುವಂತೆ ಹತ್ತು ವರ್ಷಗಳಿಂದಲು ಹೋರಾಟ ನಡೆಸುತ್ತಲೇ ಬರುತ್ತಿದ್ದರು ಸಮಸ್ಯೆ ಮಾತ್ರ ಉಲ್ಬಣವಾಗುತ್ತಲೇ ಇದೆ ಎಂದರು.

ವಸಂತ್ ಮಾತನಾಡಿ, ಆ.15ರಂದು ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸುವುದು ಶತಸಿದ್ಧ. ನಾವು ಸಂವಿಧಾನ ವಿರೋಧಿಗಳಲ್ಲ, ದೇಶ ವಿರೋಧಿಗಳಲ್ಲ. ನಮ್ಮ ಹೋರಾಟ ಸಂವಿಧಾನ ವಿರುದ್ಧ ಕೆಲಸ ಮಾಡುತ್ತಿರುವ ಅಧಿಕಾರಗಳ ನಡೆ ಖಂಡಿಸಿ, ಮೂಲಭೂತ ಸೌಕರ್ಯ ಕುಡಿಯುವ ನೀರು, ಕೆರೆಗಳ ಉಳಿವುಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.

 ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ಸಭೆ ನಡೆಸಿ ನೀಡಲಾಗಿದ್ದ ಯಾವುದೇ ಭರವಸೆಯು ಇದುವರೆಗೂ ಈಡೇರಿಲ್ಲ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡಬಳ್ಳಾಪುರದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯ ಕಚೇರಿಯನ್ನು ನಗರಕ್ಕೆ ಸ್ಥಳಾಂತರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉರುಳು ಸೇವೆ ಮಾಡಿದರು ಇದುವರೆಗೂ ಸ್ಥಳಾಂತರ ಆಗಿಲ್ಲ. ಇಂತಹ ಕನಿಷ್ಠ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಲ್ಲೂ ಸಹ ಜನಪ್ರತಿನಿಧಿಗಳು, ಜಿಲ್ಲಾಡಳಿತ ವಿಫಲವಾಗಿದೆ ಎಂದು ಹೇಳಿದರು.

ನಮ್ಮ ಭಾಗದಲ್ಲಿ ತಿಂಗಳಿಗೆ ಎರಡು‌ ಮೂರು ಸಾವುಗಳು ಆಗುತ್ತಿವೆ. ಈ ಸಾವು ಸಹಜವಾಗಿ ಬರುತ್ತಿಲ್ಲ. ಬದಲಿಗೆ ಕಿಡ್ನಿ‌ ಸಮಸ್ಯೆ, ಕ್ಯಾನ್ಸರ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಅಕಾಲಿಕ ಮರಣ ಹೊಂದುತ್ತಿದ್ದಾರೆ. ಇದಕ್ಕೆ ಕಾರಣ ಅಶುದ್ಧ ಕುಡಿಯುವ ನೀರಿನಿಂದ, ಕೆರೆಗಳ ಮಾಲಿನ್ಯದಿಂದ ಎಂದರು.

ಪ್ರಮುಖ ಬೇಡಿಕೆಗಳು

*ದೊಡ್ಡಬಳ್ಳಾಪುರ ನಗರಸಭೆ ಯುಜಿಡಿ‌ ನೀರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ‌ ಯುಜಿಡಿ ನೀರು ಮೂರನೇ ಹಂತದಲ್ಲಿ ಶುದ್ಧೀಕರಣಗೊಂಡು ಕೆರೆಗಳಿಗೆ ಬರುವಂತೆ ಮಾಡಬೇಕು

• ಅಂರ್ಜಲ ಹದಗೆಡದೇ ಇರುವ ಭಾಗದಿಂದ ಜನರಿಗೆ ಶುದ್ಧ ಕುಡಿಯುವ ನೀರು, ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು.

• ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಬೇಕು

• ಕೈಗಾರಿಕಾ ಪ್ರದೇಶದಲ್ಲಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕ ಸ್ಥಾಪನೆ ಮಾಡಿ, ಕೈಗಾರಿಕೆಗಳ ತ್ಯಾಜ್ಯ ನೀರನ್ನು ಶುದ್ಧೀಕರಿಸಿಕೊಂಡು ಕೆರೆಗಳಿಗೆ ಬಿಡದೇ ಅವರೇ ಆ ನೀರನ್ನು ಮರುಬಳಿಕೆ‌ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು….

• ಕಾನೂನು ವಿರುದ್ಧವಾಗಿ ರಾಸಾಯನಿಕ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು

ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಹೋರಾಟಗಾರರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 hour ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

4 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

22 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago