ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ ಹಾಕಲು ಮುಂದಾಗಿರುವ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಮಾರ್ಚ್ 7 ರಂದು ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು ಮಣ್ಣು ತುಂಬಿ ಮುಚ್ಚುವುದಾಗಿ ಹೇಳಿದ್ದಾರೆ.
ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಮಾರ್ಚ್ 7 ರಂದು ಕೆರೆಗೆ ಕೊಳಚೆ ನೀರು ಹರಿದುಬರುವ ರಾಜಕಾಲುವೆಯನ್ನು ಕಲ್ಲು, ಮಣ್ಣುಗಳಿಂದ ಮುಚ್ಚುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಾವಿರಾರು ಜನರೊಂದಿಗೆ ಸೇರಿ ರಾಜಕಾಲುವೆ ಮುಚ್ಚಲಾಗುವುದು ಎಂದು ವೇದಿಕೆ ಮುಖಂಡ ಜಿಂಕೆಬಚ್ಚಹಳ್ಳಿ ಸತೀಶ್ ತಿಳಿಸಿದರು.
ತ್ಯಾಜ್ಯ ನೀರನ್ನು ಶುದ್ದೀಕರಿಸಿ ಕೆರೆಗ ಬಿಡಬೇಕೆಂದು ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಗಿದೆ ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ತೆಗೆದೆಕೊಂಡಿಲ್ಲ, ಅಧಿಕಾರಿಗಳು STP ಘಟಕ ನಿರ್ಮಾಣಕ್ಕೆ ಕಾರ್ಯಾದೇಶ ಹೊರಡಿಸಲು ಇನ್ನೂ ಮೀನಾಮೇಷ ಎಣಿಸಲಾಗುತ್ತಿದೆ. ಕೆಳಹಂತದಿಂದ ಮೇಲಾಧಿಕಾರಿಗಳ ವರೆಗೂ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ಗಳಲ್ಲಿ ಮಣ್ಣು ತಂದು ರಾಜಕಾಲುವೆ ಮುಚ್ಚುವುದ್ದಾಗಿ ಹೇಳಿದರು, ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚಿಕ್ಕಣ್ಣಪ್ಪ, ಸಂದೇಶ್, ಲೋಕೇಶ್, ವಿಜಯ್ ವಸಂತಕುಮಾರ್, ಕಾಳೇಗೌಡ, ಗೋಪಾಲ್, ಕೃಷ್ಣ, ಚನ್ನೇಗೌಡ, ಸಂತೋಷ್, ರಮೇಶ್ ಇತರರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…