ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ ಹಾಕಲು ಮುಂದಾಗಿರುವ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಸದಸ್ಯರು ನಿರ್ಧರಿಸಿದ್ದು, ಮಾರ್ಚ್ 7 ರಂದು ಕೊಳಚೆ ನೀರು ಹರಿದು ಬರುವ ಕಾಲುವೆಯನ್ನು ಕಲ್ಲು ಮಣ್ಣು ತುಂಬಿ ಮುಚ್ಚುವುದಾಗಿ ಹೇಳಿದ್ದಾರೆ.
ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಮಾರ್ಚ್ 7 ರಂದು ಕೆರೆಗೆ ಕೊಳಚೆ ನೀರು ಹರಿದುಬರುವ ರಾಜಕಾಲುವೆಯನ್ನು ಕಲ್ಲು, ಮಣ್ಣುಗಳಿಂದ ಮುಚ್ಚುವ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಮಜರಾಹೊಸಹಳ್ಳಿ, ದೊಡ್ಡತುಮಕೂರು ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕೊಳಚೆ ನೀರನ್ನು ಶುದ್ದೀಕರಿಸಿ ಬಿಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಸಾವಿರಾರು ಜನರೊಂದಿಗೆ ಸೇರಿ ರಾಜಕಾಲುವೆ ಮುಚ್ಚಲಾಗುವುದು ಎಂದು ವೇದಿಕೆ ಮುಖಂಡ ಜಿಂಕೆಬಚ್ಚಹಳ್ಳಿ ಸತೀಶ್ ತಿಳಿಸಿದರು.
ತ್ಯಾಜ್ಯ ನೀರನ್ನು ಶುದ್ದೀಕರಿಸಿ ಕೆರೆಗ ಬಿಡಬೇಕೆಂದು ಜಿಲ್ಲಾಧಿಕಾರಿಯವರ ಗಮನಕ್ಕೂ ತರಲಾಗಿದೆ ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ತೆಗೆದೆಕೊಂಡಿಲ್ಲ, ಅಧಿಕಾರಿಗಳು STP ಘಟಕ ನಿರ್ಮಾಣಕ್ಕೆ ಕಾರ್ಯಾದೇಶ ಹೊರಡಿಸಲು ಇನ್ನೂ ಮೀನಾಮೇಷ ಎಣಿಸಲಾಗುತ್ತಿದೆ. ಕೆಳಹಂತದಿಂದ ಮೇಲಾಧಿಕಾರಿಗಳ ವರೆಗೂ ಮನವಿ ಮಾಡಿದರೂ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ಗಳಲ್ಲಿ ಮಣ್ಣು ತಂದು ರಾಜಕಾಲುವೆ ಮುಚ್ಚುವುದ್ದಾಗಿ ಹೇಳಿದರು, ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಚಿಕ್ಕಣ್ಣಪ್ಪ, ಸಂದೇಶ್, ಲೋಕೇಶ್, ವಿಜಯ್ ವಸಂತಕುಮಾರ್, ಕಾಳೇಗೌಡ, ಗೋಪಾಲ್, ಕೃಷ್ಣ, ಚನ್ನೇಗೌಡ, ಸಂತೋಷ್, ರಮೇಶ್ ಇತರರು ಇದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…