ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ ಕಂದಾಯ ಇಲಾಖೆಯ ನಿವೃತ್ತ ನೌಕರನೊಬ್ಬ ವಸತಿ ಬಡಾವಣೆ ನಿರ್ಮಿಸಲು ಸರ್ಕಾರಿ ಖರಾಬು ಜಮೀನನ್ನು ಕಬಳಿಸಲು ಹುನ್ನಾರ ನೆಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕುರುಡರಂತೆ ಕಂಡರು ಕಾಣದಂತೆ ಇದ್ದಾರೆ ಎಂದು ಕರವೇ ಸಂಘಟನೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಆರೋಪಿಸಿದ್ದಾರೆ.
ನಗರದ ಹೊರವಲಯದ ಐತಿಹಾಸಿಕ ಹಿನ್ನೆಲೆ ಇರುವ ಆರ್ಕಾವತಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಬಂಡೆ ಹಾಗು ಖರಾಬು ಜಾಗದಲ್ಲಿ ಇದ್ದಂತಹ ಕಲ್ಲು ಬಂಡೆಯನ್ನು ರಾತ್ರಿ ವೇಳೆ ಗ್ರಾಮದ ಜನರು ನಿದ್ರೆಯ ಸಮಯದಲ್ಲಿ ಸ್ಪೋಟಿಸಿ ಕಲ್ಲುಗಳನ್ನು ಬೇರೆಕಡೆ ತೆರವು ಮಾಡಿ ಆ ಜಾಗಕ್ಕೆ ಮಣ್ಣು ತುಂಬಿದ್ದು, ಆ ಜಾಗದಲ್ಲಿ ಇದ್ದಂತಹ ಪುರಾತನ ಕಾಲದ ಮರಗಳನ್ನು ಕಡಿದು ಹಾಕಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡಿ, ರಾಜ ಕಾಲುವೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ಬಡಾವಣೆ ತಲೆ ಎತ್ತುತ್ತಿವೆ ಎಂದು ಆರೋಪಿಸಿದ ರಾಜಘಟ್ಟ ರವಿ, ಬಫರ್ ಜೋನ್ ಗಳನ್ನು ತಿಂದು ಹಾಕುತ್ತಿದ್ದಾರೆ. ಲೇಔಟ್ ಮಾಫಿಯಾಗಳು ಕೆರೆ ಅಂಗಳ ಕೆರೆ ಕೆಳಗೆ ವಸತಿಗೆ ಯೋಗ್ಯವೇ ಅಲ್ಲದ ಜಮೀನುಗಳನ್ನು ನಿವೇಶನ ವಿಂಗಡಣೆ ಮಾಡಿ ಹೆಚ್ಚು ಹಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂತಹವರ ಬಗ್ಗೆ ಮಾಹಿತಿ ತಿಳಿದಿದ್ದರು ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಮಾಹಿತಿ ಕೇಳಿದರೆ ಉಢಾಷೆ ಉತ್ತರ ನೀಡುತ್ತಾರೆ. ಸರ್ಕಾರಿ ಜಾಗಗಳನ್ನು ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…