ಅರ್ಕಾವತಿ ನದಿ ಪಾತ್ರದ ಸರ್ಕಾರಿ ಜಾಗ ಕಬಳಿಕೆ ಆರೋಪ: ಸರ್ಕಾರಿ ಭೂಮಿ ರಕ್ಷಿಸುವಂತೆ ಕರವೇ ರಾಜಘಟ್ಟ ರವಿ ಆಗ್ರಹ

ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ ಕಂದಾಯ ಇಲಾಖೆಯ ನಿವೃತ್ತ ನೌಕರನೊಬ್ಬ ವಸತಿ ಬಡಾವಣೆ ನಿರ್ಮಿಸಲು ಸರ್ಕಾರಿ ಖರಾಬು ಜಮೀನನ್ನು ಕಬಳಿಸಲು ಹುನ್ನಾರ ನೆಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕುರುಡರಂತೆ ಕಂಡರು ಕಾಣದಂತೆ ಇದ್ದಾರೆ ಎಂದು ಕರವೇ ಸಂಘಟನೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ‌ಆರೋಪಿಸಿದ್ದಾರೆ.

ನಗರದ ಹೊರವಲಯದ ಐತಿಹಾಸಿಕ ಹಿನ್ನೆಲೆ ಇರುವ ಆರ್ಕಾವತಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಬಂಡೆ ಹಾಗು ಖರಾಬು ಜಾಗದಲ್ಲಿ ಇದ್ದಂತಹ ಕಲ್ಲು ಬಂಡೆಯನ್ನು ರಾತ್ರಿ ವೇಳೆ ಗ್ರಾಮದ ಜನರು ನಿದ್ರೆಯ ಸಮಯದಲ್ಲಿ ಸ್ಪೋಟಿಸಿ ಕಲ್ಲುಗಳನ್ನು ಬೇರೆಕಡೆ ತೆರವು ಮಾಡಿ ಆ ಜಾಗಕ್ಕೆ ಮಣ್ಣು ತುಂಬಿದ್ದು, ಆ ಜಾಗದಲ್ಲಿ ಇದ್ದಂತಹ ಪುರಾತನ ಕಾಲದ ಮರಗಳನ್ನು ಕಡಿದು ಹಾಕಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡಿ, ರಾಜ ಕಾಲುವೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ಬಡಾವಣೆ ತಲೆ ಎತ್ತುತ್ತಿವೆ ಎಂದು ಆರೋಪಿಸಿದ ರಾಜಘಟ್ಟ ರವಿ, ಬಫರ್ ಜೋನ್ ಗಳನ್ನು ತಿಂದು ಹಾಕುತ್ತಿದ್ದಾರೆ. ಲೇಔಟ್ ಮಾಫಿಯಾಗಳು ಕೆರೆ ಅಂಗಳ ಕೆರೆ ಕೆಳಗೆ ವಸತಿಗೆ ಯೋಗ್ಯವೇ ಅಲ್ಲದ ಜಮೀನುಗಳನ್ನು ನಿವೇಶನ ವಿಂಗಡಣೆ ಮಾಡಿ ಹೆಚ್ಚು ಹಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂತಹವರ ಬಗ್ಗೆ ಮಾಹಿತಿ‌ ತಿಳಿದಿದ್ದರು ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಮಾಹಿತಿ ಕೇಳಿದರೆ ಉಢಾಷೆ ಉತ್ತರ ನೀಡುತ್ತಾರೆ. ಸರ್ಕಾರಿ ಜಾಗಗಳನ್ನು ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ‌ ನೀಡಿದ್ದಾರೆ.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

5 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

12 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

13 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago