ಅರ್ಕಾವತಿ ನದಿ ಪಾತ್ರದ ಸರ್ಕಾರಿ ಜಾಗ ಕಬಳಿಕೆ ಆರೋಪ: ಸರ್ಕಾರಿ ಭೂಮಿ ರಕ್ಷಿಸುವಂತೆ ಕರವೇ ರಾಜಘಟ್ಟ ರವಿ ಆಗ್ರಹ

ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ ಕಂದಾಯ ಇಲಾಖೆಯ ನಿವೃತ್ತ ನೌಕರನೊಬ್ಬ ವಸತಿ ಬಡಾವಣೆ ನಿರ್ಮಿಸಲು ಸರ್ಕಾರಿ ಖರಾಬು ಜಮೀನನ್ನು ಕಬಳಿಸಲು ಹುನ್ನಾರ ನೆಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಕುರುಡರಂತೆ ಕಂಡರು ಕಾಣದಂತೆ ಇದ್ದಾರೆ ಎಂದು ಕರವೇ ಸಂಘಟನೆ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ‌ಆರೋಪಿಸಿದ್ದಾರೆ.

ನಗರದ ಹೊರವಲಯದ ಐತಿಹಾಸಿಕ ಹಿನ್ನೆಲೆ ಇರುವ ಆರ್ಕಾವತಿ ನದಿ ದಂಡೆಯಲ್ಲಿರುವ ಶ್ರೀರಾಮ ದೇವಾಲಯಕ್ಕೆ ಹೊಂದಿಕೊಂಡಂತೆ ಇರುವ ಸರ್ಕಾರಿ ಬಂಡೆ ಹಾಗು ಖರಾಬು ಜಾಗದಲ್ಲಿ ಇದ್ದಂತಹ ಕಲ್ಲು ಬಂಡೆಯನ್ನು ರಾತ್ರಿ ವೇಳೆ ಗ್ರಾಮದ ಜನರು ನಿದ್ರೆಯ ಸಮಯದಲ್ಲಿ ಸ್ಪೋಟಿಸಿ ಕಲ್ಲುಗಳನ್ನು ಬೇರೆಕಡೆ ತೆರವು ಮಾಡಿ ಆ ಜಾಗಕ್ಕೆ ಮಣ್ಣು ತುಂಬಿದ್ದು, ಆ ಜಾಗದಲ್ಲಿ ಇದ್ದಂತಹ ಪುರಾತನ ಕಾಲದ ಮರಗಳನ್ನು ಕಡಿದು ಹಾಕಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡಿ, ರಾಜ ಕಾಲುವೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದ ವ್ಯಾಪ್ತಿಯಲ್ಲಿ ನಿಯಮ ಬಾಹಿರವಾಗಿ ಅನಧಿಕೃತವಾಗಿ ಬಡಾವಣೆ ತಲೆ ಎತ್ತುತ್ತಿವೆ ಎಂದು ಆರೋಪಿಸಿದ ರಾಜಘಟ್ಟ ರವಿ, ಬಫರ್ ಜೋನ್ ಗಳನ್ನು ತಿಂದು ಹಾಕುತ್ತಿದ್ದಾರೆ. ಲೇಔಟ್ ಮಾಫಿಯಾಗಳು ಕೆರೆ ಅಂಗಳ ಕೆರೆ ಕೆಳಗೆ ವಸತಿಗೆ ಯೋಗ್ಯವೇ ಅಲ್ಲದ ಜಮೀನುಗಳನ್ನು ನಿವೇಶನ ವಿಂಗಡಣೆ ಮಾಡಿ ಹೆಚ್ಚು ಹಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಂತಹವರ ಬಗ್ಗೆ ಮಾಹಿತಿ‌ ತಿಳಿದಿದ್ದರು ಯಾವುದೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಮಾಹಿತಿ ಕೇಳಿದರೆ ಉಢಾಷೆ ಉತ್ತರ ನೀಡುತ್ತಾರೆ. ಸರ್ಕಾರಿ ಜಾಗಗಳನ್ನು ಕಬಳಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ‌ ನೀಡಿದ್ದಾರೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

4 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

5 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

11 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

22 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

23 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

24 hours ago