ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.
ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.
ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ.
ಪದವಿ, ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್ಲೈನ್ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.
ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…