ಅರ್ಹ ಅಭ್ಯರ್ಥಿಗಳು ‘ಯುವನಿಧಿ’ಗೆ ನೋಂದಾಯಿಸಿ

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ, ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು  ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ.

ಪದವಿ, ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

11 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

14 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago