ಅರ್ಹ ಅಭ್ಯರ್ಥಿಗಳು ‘ಯುವನಿಧಿ’ಗೆ ನೋಂದಾಯಿಸಿ

ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಡಿ ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ ಶಿವಶಂಕರ್ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಗೆ ಮುಖ್ಯಮಂತ್ರಿಗಳು ದಿನಾಂಕ 26-12-2023 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಸದರಿ ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ, ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು  ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.Karnataka.gov.in ನಲ್ಲಿ ನೋಂದಾಯಿಸಲು ಈ ಮೂಲಕ ತಿಳಿಸಲಾಗಿದೆ.

ಪದವಿ, ಡಿಪ್ಲೋಮಾ ತೇರ್ಗಡೆಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ 1800-599-9918 ಇಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago