ಅಲಿಪುರ Part-3: ಅಲಿಪುರದಲ್ಲಿ ರಾಜಕೀಯ ಹಿನ್ನೆಲೆ ಹೇಗಿದೆ….?

ಅಲಿಪುರದಲ್ಲಿ ಶಿಯಾ ಮುಸ್ಲಿಮರ ರಾಜಕೀಯ ಪ್ರವೇಶ ಅಷ್ಟಕ್ಕಷ್ಟೇ. ವ್ಯವಹಾರ, ಉದ್ಯಮ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ತೊಡಗಿಸಿಕೊಂಡಿರುವ ಇಲ್ಲಿನ ಜನರು ರಾಜಕೀಯಕ್ಕೆ ಹೆಚ್ಚು ಆಸಕ್ತಿ ತೋರುತ್ತಿಲ್ಲ.

ಜೆಡಿಎಸ್ ನಲ್ಲಿ ಮಿರ್ ರೋಷನ್ ಅಬ್ಬಾಸ್, ಕಾಂಗ್ರೆಸ್ ಪಕ್ಷದಲ್ಲಿ ಮಿರ್ ರೋಷನ್ ಅಲಿ ಅವರು ಸಂಘಟನಾತ್ಮಕ ಹುದ್ದೆ ಹೊಂದಿದ್ದರು. ಉಳಿದಂತೆ ಯಾರೂ ಕೂಡ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಎರಡು-ಮೂರು ಬಾರಿ ಅಲಿಪುರಕ್ಕೆ ಆಗಮಿಸಿದ್ದರು.

ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 29 ಸ್ಥಾನಗಳಿದ್ದು,  ಅದರಲ್ಲಿ 25 ಸ್ಥಾನಗಳು ಶಿಯಾ ಮುಸ್ಲಿಂ ಅವರದು, ಉಳಿದ 4 ಸ್ಥಾನಗಳು ಹಿಂದುಗಳದ್ದು, ಈ ಹಿನ್ನೆಲೆ ಕೋರಂ ಮುಸ್ಲಿಂ ಅವರದ್ದು ಇರುವುದರಿಂದ ಅಂಜುಮನ್‌ ಸಮಿತಿ ಅಣತಿ ಮೇರೆಗೆ ಕೆಲಸ ಕಾರ್ಯಗಳು ನಡೆಯುತ್ತವೆ. ಅಂಜುಮನ್‌ ಸಮಿತಿಯ ನಿರ್ಧಾರವನ್ನು ಯಾರು ಧಿಕ್ಕರಿಸುವುದಿಲ್ಲ.

ಶಿಯಾ ಮುಸ್ಲಿಮರಿಗೆ ಪ್ರತ್ಯೇಕ ಕೇಬಲ್ ಚಾನೆಲ್

ಅಲಿಪುರದಲ್ಲಿ ಶಿಯಾ ಮುಸ್ಲಿಮರು ಶೇ 90ರಷ್ಟು ಇರುವುದರಿಂದ ಅಂಜುಮನ್‌ ಜಾಫರಿಯಾ ಸಮಿತಿ ಗ್ರಾಮಕ್ಕಾಗಿಯೇ ಪ್ರತ್ಯೇಕ ಕೇಬಲ್ ಚಾನೆಲ್ ಆರಂಭಿಸಿದೆ.

‘ಅಲಿ ಟಿವಿ’ ಹೆಸರಿನಲ್ಲಿ ಚಾನೆಲ್‌ನಲ್ಲಿ ಮಸೀದಿಯಲ್ಲಿ ನಿತ್ಯ ಪ್ರಾರ್ಥನೆ, ವಿಶೇಷ ಆಚರಣೆಗಳು, ಕುರಾನ್ ಪಠಣ, ಧಾರ್ಮಿಕ ಗುರುಗಳ ಸಂದೇಶ ಹಾಗೂ ಗ್ರಾಮಕ್ಕೆ ಭೇಟಿ ನೀಡುವ ಅತಿಥಿಗಳ ಮಾತು ಇರಲಿದೆ. ಪ್ರತಿಯೊಬ್ಬರೂ ಕೇಬಲ್ ಚಾನೆಲ್ ಗೆ ಮಾಸಿಕ 350ರೂ. ಪಾವತಿಸುತ್ತಾರೆ. ಚಾನೆಲ್‌ನಲ್ಲಿ ಯಾವುದೇ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಲಿ ಟಿವಿ ಹೊರತುಪಡಿಸಿ ಬೇರಾವ ಚಾನೆಲ್ ಹಾಕಿಸಿಕೊಳ್ಳಬಾರದು ಎಂಬ ನಿರ್ಬಂಧವಿಲ್ಲ ಎಂದು ಮಿ‌ರ್ ತಸ್ವೀರ್ ಅಬ್ಬಾಸ್ ತಿಳಿಸಿದರು.

ಕಳ್ಳಸಾಗಾಣಿಕೆ ಆರೋಪವೂ ಇದೆ

2009 ರಲ್ಲಿ ಚಿನ್ನ ಹಾಗೂ ಬೆಲೆ ಬಾಳುವ ಹರಳುಗಳನ್ನು ಕಳ್ಳಸಾಗಣಿಕೆ ಮಾಡುತ್ತಿದ್ದ ಆರೋಪದ ಮೇಲೆ ಅಲಿಪುರದ ಆರು ಮಂದಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. “ಅಲಿಪುರದಲ್ಲಿ ಇತ್ತೀಚೆಗೆ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿಲ್ಲ” ಎಂದು ಮಂಚೇನಹಳ್ಳಿ ಪೊಲೀಸ್‌ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ನರಸಿಂಹಮೂರ್ತಿ ತಿಳಿಸಿದರು.

ಅಲಿಪುರ ಗ್ರಾಮದಲ್ಲಿ ಸುನ್ನಿ ಮುಸ್ಲಿಮರು ಕೂಡ ಬೆರಳೆಣಿಕೆ ಕುಟುಂಬಗಳಿವೆ. ಆದರೆ, ಹಿಂದೂ ಮತ್ತು ಮುಸ್ಲಿಮರು ಅನೋನ್ಯದಿಂದಲೇ ಬದುಕು ಸಾಗಿಸುತ್ತಾರೆ. ಕಳೆದ ಎರಡು ವರ್ಷದ ಹಿಂದೆ ಬಾಹ್ಯ ಶಕ್ತಿಗಳಿಂದ ಸಾಮರಸ್ಯ ಕದಡಿದ್ದ ಪ್ರಯತ್ನ ನಡೆದರೂ ಗ್ರಾಮಸ್ಥರು ಅದಕ್ಕೆ ಆಸ್ಪದ ನೀಡಿಲ್ಲ. ಜನಪ್ರತಿನಿಧಿಗಳು ಕೂಡ ಗ್ರಾಮದ ಅಭಿವೃದ್ಧಿಗೆ ನೆರವಾಗುತ್ತಿದ್ದು, ಶಾಂತಿ ಸೌಹಾರ್ದತೆ ನೆಲೆಸಲು ಕಾರಣವಾಗಿದೆ.

ಅಲಿಪುರದಲ್ಲಿ ಕೃಷಿ

ಅಲಿಪುರ ಗ್ರಾಮ ವಿದೇಶಗಳೊಂದಿಗೆ ವ್ಯಾಪಾರ ಸಂಬಂಧ ಇಟ್ಟುಕೊಂಡರೂ ಕೃಷಿ ಕಾರ್ಯವೂ ನಡೆಯುತ್ತಿದೆ. ಗ್ರಾಮ ಹಾಗೂ ಸುತ್ತಲಿನ ಸುಮಾರು 1000 ಎಕರೆಯ ವಿಸ್ತೀರ್ಣದಲ್ಲಿ ಕೃಷಿ ಕೆಲಸಗಳನ್ನು ಅಲೀಪುರದ ಗ್ರಾಮಸ್ಥರು ಮಾಡುತ್ತಿದ್ದಾರೆ.

ಪ್ರಮುಖವಾಗಿ ಜೋಳ, ಈರುಳ್ಳಿ ಹಾಗೂ ಸುಗಂಧರಾಜ ಹೂವಿನ ಬೆಳೆಯನ್ನು ಇಲ್ಲಿ ಬೆಳೆಯಲಾಗುತ್ತದೆ. ಸುತ್ತಲಿನ ಗ್ರಾಮಗಳ ನೂರಾರು ಜನರು ಕೂಲಿ ಕೆಲಸಕ್ಕಾಗಿ ಅಲೀಪುರಕ್ಕೆ ಆಗಮಿಸುತ್ತಾರೆ ಎಂದು ಗ್ರಾಮದ ಮಿ‌ರ್ ತಸ್ವೀ‌ರ್ ಅಬ್ಬಾಸ್ ತಿಳಿಸಿದರು.

ಹಿಂದೂ-ಮುಸ್ಲಿಂ ಸಾಮರಸ್ಯದ ಬದುಕು

ಅಲಿಪುರ ಗ್ರಾಮದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾದರೂ ಮುಸ್ಲಿಮರೊಂದಿಗೆ ಸಾಮರಸ್ಯದಿಂದ ಬದುಕು ಸಾಗಿಸುತ್ತಿದ್ದಾರೆ. ಗಣೇಶ ಚತುರ್ಥಿ, ಅಯ್ಯಪ್ಪ ಮಾಲಾಧಾರಣೆ ಸಂದರ್ಭದಲ್ಲಿ ಅಂಜುಮನ್‌ ಸಮಿತಿ ಸೇವೆ ಒದಗಿಸಲಿದೆ. ಮೊಹರಂ ಹಬ್ಬದಲ್ಲಿ ಹಿಂದೂಗಳು ಕೂಡ ಭಾಗಿಯಾಗುತ್ತಾರೆ. ಮೊಹರಂ ಹತ್ತನೇ ದಿನ ಸುತ್ತಲಿನ ಎಲ್ಲ ಗ್ರಾಮಗಳ ಜನರು ಬಾಬಯ್ಯನ ಹಬ್ಬದಲ್ಲಿ ಭಾಗವಹಿಸುತ್ತಾರೆ ಎಂದು ಅಂಜುಮನ್ ಜಾಫರಿಯಾ ಸಮಿತಿ ಸದಸ್ಯ ಮಿರ್ ಶಬಾಹತ್ ಹುಸೇನ್ ತಿಳಿಸಿದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago