ಅಲೆಮಾರಿ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅರ್ಹ ಫಲಾಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್(https://sevasindhu.Karnataka.gov.in) ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದವರು ಆರ್ಥಿಕ ಅಭಿವೃದ್ದಿ ಹೊಂದಲು ವಿವಿಧ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.

ಯೋಜನೆಗಳ ವಿವರ

ಪರಿಶಿಷ್ಟ ಜಾತಿ ‌ಮತ್ತು ಪರಿಶಿಷ್ಟ ಪಂಗಡಕ್ಕೆ ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ (ಘಟಕ ವೆಚ್ಚ ರೂ.1.00 ಲಕ್ಷ). ಉಧ್ಯಮ ಶೀಲತಾ ಯೋಜನೆ (ಘಟಕ ವೆಚ್ಚ ರೂ.2.00 ಲಕ್ಷ), ಉಧ್ಯಮ ಶೀಲತಾ ಯೋಜನೆ (ಸರಕು ಸಾಗಾಣಿಕೆ, ನಾಲ್ಕು ಚಕ್ರಗಳ ವಾಹನ ಹಾಗೂ ಇತ್ಯಾದಿ). ಪರಿಶಿಷ್ಟ ಜಾತಿಗೆ ಘಟಕ ವೆಚ್ಚ ರೂ 2.00ಲಕ್ಷ, ಪರಿಶಿಷ್ಟ ಪಂಗಡಕ್ಕೆ ಘಟಕ ವೆಚ್ಚ ರೂ 4.00ಲಕ್ಷ. ಪರಿಶಿಷ್ಟ ಪಂಗಡಕ್ಕೆ ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ‌ ಹಾಗೂ ಗಂಗಾ ಕಲ್ಯಾಣ ಯೋಜನೆ‌‌.
ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿಪಡಿಸಿದ ಗುರಿಯಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.217, 2ನೇ ಮಹಡಿ , ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ದೂ.ಸಂ 080 29787447. ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ತಾಲ್ಲೂಕು ದೂ.ಸಂ 080-27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ 080-27623681. ಹೊಸಕೋಟೆ ತಾಲ್ಲೂಕು ದೂ.ಸಂ 080-27931528. ನೆಲಮಂಗಲ ತಾಲ್ಲೂಕು ದೂ.ಸಂ 080-27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

6 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

8 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

8 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago