ಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ: ನಗರಸಭೆ ಎದುರು ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ : ನಗರಸಭಾ ವ್ಯಾಪ್ತಿಯಲ್ಲಿ ಮಂಜೂರಾಯಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತ ಜನರು ವಾಸವಿಲ್ಲದೇ ಇರುವ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.

ನಗರಸಭಾ ಸದಸ್ಯ ಶಿವಶಂಕರ್ ಮಾತನಾಡಿ, ತಾಲ್ಲೂಕಿನ ನಗರಸಭಾ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯಿಂದ ಅಲ್ಪಸಂಖ್ಯಾತರಿಗೆ ಮೂರು ಕೋಟಿ ಅನುದಾನವನ್ನು ಮಂಜೂರು ಮಾಡಿರುವುದು ಸರಿಯಷ್ಟೆ. ಆದರೆ, ಕಾಮಗಾರಿಗಳು ಮಾತ್ರ ಅಲ್ಪಸಂಖ್ಯಾತ ಜನ ವಾಸ ಮಾಡದೇ ಇರುವ ಸ್ಥಳಗಳಲ್ಲಿ ಕಾಮಗಾರಿಗಳು ಮಾಡುತ್ತಿದ್ದು, ಅಲ್ಪಸಂಖ್ಯಾತ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ಆರೋಪಿಸಿದರು.

ಈ ಕಾಮಗಾರಿಗಳಿಗೆ ನಗರಸಭೆಯಿಂದ ಸಂಬಂಧಪಟ್ಟ ಗುತ್ತಿಗೆದಾರರು ಯಾವುದೇ ರೀತಿಯ ಎನ್.ಓ.ಸಿ.ಯನ್ನು ಪಡೆದುಕೊಂಡಿರುವುದಿಲ್ಲ. ಅಷ್ಟೇ ಅಲ್ಲದೇ ಈ ಅನುದಾನದಲ್ಲಿ ಮಂಜೂರು ಆಗಿರುವಂತೆ ಆಂದಾಜು ಪಟ್ಟಿಯಂತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸಂಸ್ಥೆಯೊಂದಿಗೆ ಚರ್ಚಿಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಯಾವುದೇ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಬೇಕಾದರೇ ಶಿಷ್ಟಾಚಾರ ಪಾಲಿಸಬೇಕು. ಆದರೆ, ಇದು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರು ಒಂದು ರೀತಿಯ ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಂತರ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಕೆ.ಆರ್.ಐ.ಡಿ.ಎಲ್ ನಡೆಸುತ್ತಿರುವ ಕಾಮಗಾರಿ ಕಳಪೆಯಿಂದೆ ಕೂಡಿದೆ, ಅಲ್ಪಸಂಖ್ಯಾತರು ವಾಸ ಮಾಡದ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತರ ಗಮನಕ್ಕೆ ತಂದೆವು, ಆದರೆ, ಅವರು ಇದು ನನ್ನ ಗಮನಕ್ಕೆ ಬಂದಿಲ್ಲ, ಗುತ್ತಿಗೆದಾರರು ಅಂದಾಜು ಪಟ್ಡಿಯೇ ನೀಡಿಲ್ಲ, ನೀವು ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಕೇಳಬೇಕು ಎಂದು ಹೇಳುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಫೋನ್ ಕರೆ ಮಾಡಿ ಮಾತಾಡಿದಾಗ ಅವರು ಯಾವುದೇ ರೀತಿಯ ನಿಖರ ಮಾಹಿತಿ ನೀಡದೇ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ರಾಮಕೃಷ್ಣಯ್ಯ, ಅಂಜನಮೂರ್ತಿ, ನಗರಸಭಾ ಸದಸ್ಯರಾದ ಅಲ್ತಾಫ್, ರೂಪಿಣಿ ಮಂಜುನಾಥ್, ರಜನಿ ಸುಬ್ರಮಣಿ, ನಾಗಮಣಿ, ಮಂಜುಳಾ, ಚಂದ್ರಮೋಹನ್, ಆನಂದ್, ನಾಗರಾಜ್, ಶಿವಣ್ಣ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರೇಗೌಡ, ಗ್ರಾಮಾಂತರ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಮುಖಂಡರಾದ, ಫಯಾಜ್ ಅಖಿಲೇಶ್, ರಾಜಘಟ್ಟ ರವಿ, ವಿಶ್ವಾಸ್ ಗೌಡ, ಶ್ರೀನಗರ ಬಶೀರ್, ಜನಪರ ಮಂಜು ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

9 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

20 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

20 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

22 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

22 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

1 day ago