ಅಲ್ಪಸಂಖ್ಯಾತರ ಅನುದಾನ ಬಹುಸಂಖ್ಯಾತರ ಪಾಲಾದ ಆರೋಪ: ನಗರಸಭೆ ಎದುರು ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ : ನಗರಸಭಾ ವ್ಯಾಪ್ತಿಯಲ್ಲಿ ಮಂಜೂರಾಯಾಗಿರುವ ಕಾಮಗಾರಿಗಳನ್ನು ಅಲ್ಪಸಂಖ್ಯಾತ ಜನರು ವಾಸವಿಲ್ಲದೇ ಇರುವ ಕಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ನಗರಸಭೆ ಮುಂಭಾಗ ಪ್ರತಿಭಟನೆ ನೆಡೆಸಲಾಯಿತು.

ನಗರಸಭಾ ಸದಸ್ಯ ಶಿವಶಂಕರ್ ಮಾತನಾಡಿ, ತಾಲ್ಲೂಕಿನ ನಗರಸಭಾ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ಸಂಸ್ಥೆಯಿಂದ ಅಲ್ಪಸಂಖ್ಯಾತರಿಗೆ ಮೂರು ಕೋಟಿ ಅನುದಾನವನ್ನು ಮಂಜೂರು ಮಾಡಿರುವುದು ಸರಿಯಷ್ಟೆ. ಆದರೆ, ಕಾಮಗಾರಿಗಳು ಮಾತ್ರ ಅಲ್ಪಸಂಖ್ಯಾತ ಜನ ವಾಸ ಮಾಡದೇ ಇರುವ ಸ್ಥಳಗಳಲ್ಲಿ ಕಾಮಗಾರಿಗಳು ಮಾಡುತ್ತಿದ್ದು, ಅಲ್ಪಸಂಖ್ಯಾತ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ಆರೋಪಿಸಿದರು.

ಈ ಕಾಮಗಾರಿಗಳಿಗೆ ನಗರಸಭೆಯಿಂದ ಸಂಬಂಧಪಟ್ಟ ಗುತ್ತಿಗೆದಾರರು ಯಾವುದೇ ರೀತಿಯ ಎನ್.ಓ.ಸಿ.ಯನ್ನು ಪಡೆದುಕೊಂಡಿರುವುದಿಲ್ಲ. ಅಷ್ಟೇ ಅಲ್ಲದೇ ಈ ಅನುದಾನದಲ್ಲಿ ಮಂಜೂರು ಆಗಿರುವಂತೆ ಆಂದಾಜು ಪಟ್ಟಿಯಂತೆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸಂಸ್ಥೆಯೊಂದಿಗೆ ಚರ್ಚಿಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಯಾವುದೇ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಬೇಕಾದರೇ ಶಿಷ್ಟಾಚಾರ ಪಾಲಿಸಬೇಕು. ಆದರೆ, ಇದು ಯಾವುದೂ ನಡೆಯುತ್ತಿಲ್ಲ. ಗುತ್ತಿಗೆದಾರರು ಒಂದು ರೀತಿಯ ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಂತರ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಕೆ.ಆರ್.ಐ.ಡಿ.ಎಲ್ ನಡೆಸುತ್ತಿರುವ ಕಾಮಗಾರಿ ಕಳಪೆಯಿಂದೆ ಕೂಡಿದೆ, ಅಲ್ಪಸಂಖ್ಯಾತರು ವಾಸ ಮಾಡದ ಜಾಗದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತರ ಗಮನಕ್ಕೆ ತಂದೆವು, ಆದರೆ, ಅವರು ಇದು ನನ್ನ ಗಮನಕ್ಕೆ ಬಂದಿಲ್ಲ, ಗುತ್ತಿಗೆದಾರರು ಅಂದಾಜು ಪಟ್ಡಿಯೇ ನೀಡಿಲ್ಲ, ನೀವು ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಕೇಳಬೇಕು ಎಂದು ಹೇಳುತ್ತಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಫೋನ್ ಕರೆ ಮಾಡಿ ಮಾತಾಡಿದಾಗ ಅವರು ಯಾವುದೇ ರೀತಿಯ ನಿಖರ ಮಾಹಿತಿ ನೀಡದೇ ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಚುಂಚೇಗೌಡ, ಸದಸ್ಯರಾದ ರಾಮಕೃಷ್ಣಯ್ಯ, ಅಂಜನಮೂರ್ತಿ, ನಗರಸಭಾ ಸದಸ್ಯರಾದ ಅಲ್ತಾಫ್, ರೂಪಿಣಿ ಮಂಜುನಾಥ್, ರಜನಿ ಸುಬ್ರಮಣಿ, ನಾಗಮಣಿ, ಮಂಜುಳಾ, ಚಂದ್ರಮೋಹನ್, ಆನಂದ್, ನಾಗರಾಜ್, ಶಿವಣ್ಣ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೈರೇಗೌಡ, ಗ್ರಾಮಾಂತರ ಅಧ್ಯಕ್ಷ ಅಪ್ಪಿ ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಮುಖಂಡರಾದ, ಫಯಾಜ್ ಅಖಿಲೇಶ್, ರಾಜಘಟ್ಟ ರವಿ, ವಿಶ್ವಾಸ್ ಗೌಡ, ಶ್ರೀನಗರ ಬಶೀರ್, ಜನಪರ ಮಂಜು ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

23 minutes ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

1 hour ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

6 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

7 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

14 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

22 hours ago