ಅಲ್ಪಸಂಖ್ಯಾತರ ಬೇಡಿಕೆ, ಸಮಸ್ಯೆ ಕಾನೂನು ಅಡಿಯಲ್ಲಿ ಬಗೆಹರಿಸಲು ಆಯೋಗ ಬದ್ಧ – ಅಬ್ದುಲ್ ಅಜೀಮ್

ಅಲ್ಪ ಸಂಖ್ಯಾತ ಸಮುದಾಯದ  ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರ ಸಮಸ್ಯೆ, ಮನವಿ, ಬೇಡಿಕೆಗಳನ್ನು ಕಾನೂನು ಅಡಿಯಲ್ಲಿ ಬಗೆಹರಿಸಲು ಆಯೋಗವು ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಸಮುದಾಯದವರ ಕುಂದು-ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವ ಸೌಲಭ್ಯವು  ಅಲ್ಪಸಂಖ್ಯಾತ ಸಮುದಾಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಸಂವಿಧಾನದ ಅಡಿಯಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಅಲ್ಪಸಂಖ್ಯಾತರ ಕಲ್ಯಾಣ ಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು ಆಯೋಗದ ಜವಾಬ್ದಾರಿಯಾಗಿರುತ್ತದೆ. ಕುಂದು ಕೊರತೆ ಸಭೆಗಳನ್ನು ಏರ್ಪಡಿಸುವುದರಿಂದ ಸಮುದಾಯದಲ್ಲಿನ ಸಮಸ್ಯೆಗಳನ್ನು ಅರಿತು ಶೀಘ್ರ ಬಗೆಹರಿಸಬಹುದು ಎಂದು ಅವರು ಹೇಳಿದರು.

ಜಮೀನು ಖಾತೆ ಬದಲಾವಣೆ, ಸ್ಮಶಾನ ಜಾಗ ಗುರುತಿಸುವಿಕೆ, ಜಮೀನು ಸರ್ವೆ ಕಾರ್ಯ ವಿಳಂಬ, ಅಕ್ರಮ ಭೂ ಕಬಳಿಕೆ, ವಕ್ಫ್ ಆಸ್ತಿ ಹದ್ದುಬಸ್ತು, ಉರ್ದು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ದೂರು, ಅಹವಾಲುಗಳನ್ನು ಅಲ್ಪಸಂಖ್ಯಾತ ಸಮುದಾಯದವರು ಸಲ್ಲಿಸಿದರು.

ಕುಂದು ಕೊರತೆ ಸಭೆ ನಂತರ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇ.15 ರಷ್ಟನ್ನು ಅಲ್ಪಸಂಖ್ಯಾತರಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಕಾಯ್ದಿರಿಸಿ, ನೀಡಲಾಗಿರುವ ಸೌಲಭ್ಯಗಳ ಕುರಿತು 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಮುಖ್ಯ ಕಾರ್ಯನಿರ್ವಹಕಾಧಿಕಾರಿ ಡಾ.ಅನುರಾಧ.ಕೆ.ಎನ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೊ ಸ್, ಆಯೋಗದ ವಿಶೇಷಾಧಿಕಾರಿ ಮುಜೀಬುಲ್ಲಾ ಜಫಾರಿ,  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕವಿತಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago