ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಕ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು State Scholarship Portal https://SSP.Karnataka.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸುವುದು ಮತ್ತು ಆನ್ ಲೈನ್ ಅರ್ಜಿ ಪ್ರತಿಯೊಂದಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಶಾಲೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರಿಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ/ NPCI ಮ್ಯಾಪ್ ಆಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಕಚೇರಿ ದೂರವಾಣಿ ಸಂಖ್ಯೆ
1.ಜಿಲ್ಲಾ ಕಚೇರಿ, ದೇವನಹಳ್ಳಿ ದೂ.ಸಂಖ್ಯೆ 080 29787455. 2.ತಾಲ್ಲೂಕು ಮಾಹಿತಿ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು ದೂ ಸಂಖ್ಯೆ 9986874875. 3. ನೆಲಮಂಗಲ ತಾಲ್ಲೂಕು ದೂ ಸಂಖ್ಯೆ 8660197516. 4.ದೇವನಹಳ್ಳಿ ತಾಲ್ಲೂಕು ದೂ ಸಂಖ್ಯೆ 8861926851. 5.ಹೊಸಕೋಟೆ ತಾಲ್ಲೂಕು ದೂ ಸಂಖ್ಯೆ 7676905779. 6.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ 8277799990 ಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…