ಅವಕಾಶವಾದಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶವಿಲ್ಲ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಯಾರು ಬೇಕಾದರೂ ಸೇರ್ಪಡೆಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದವರಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಬಾಗಿಲು ತಟ್ಟಿದ್ದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಅವಕಾಶಗಳಿಗೋಸ್ಕರ ಕಾಂಗ್ರೆಸ್ ಪಕ್ಷವನ್ನ ಸೇರುವವರಿಗೆ ಪಕ್ಷದಲ್ಲಿ ಎಂದೂ ಮಣೆ ಹಾಕುವುದಿಲ್ಲ. ಅವರ ಅನುಕೂಲ ಸಿದ್ಧವಾಗಿ ನಮ್ಮ ಪಕ್ಷ ಇಲ್ಲ. ಪಕ್ಷಕ್ಕೆ ಬಂದ ಮೇಲೆ ಸಿದ್ಧಾಂತದ ಮೇಲೆ ನಿಲ್ಲ ಬೇಕಾಗುತ್ತದೆ. ಬರೀ ಅವಕಾಶಕ್ಕೆ ಬರೋವವರಿಗೆ ಪಕ್ಷದಲ್ಲಿ ಸ್ಥಾನ ಇಲ್ಲ. ಸದ್ಯ ನನ್ನ ಸಂಪರ್ಕದಲ್ಲಿ ಯಾವುದೇ ಬಿಜೆಪಿ-ಜೆಡಿಎಸ್ ಶಾಸಕರು ಇಲ್ಲ ಎಂದರು.
ಕಾಂಗ್ರೆಸ್ ಸರ್ಕಾರ 6 ತಿಂಗಳೊಳಗೆ ಬೀಳುತ್ತದೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರಿಗೆ ಮುಖ್ಯಮಂತ್ರಿ ಆಗೋ ಆತುರ, ಅವರು ಈ ಜನ್ಮದಲ್ಲಿ ಮುಖ್ಯಮಂತ್ರಿ ಆಗೋ ಭರವಸೆ ಇಲ್ಲ. ಅವರನ್ನು ಅವರ ಪಕ್ಷದಲ್ಲೇ ಗಂಭೀರವಾಗಿ ತೆಗೆದುಕೊಂಡಿಲ್ಲ, ಇನ್ನು ನಾವು ತೆಗೆದುಕೊಳ್ಳಲಾಗುತ್ತದೆಯೇ..? ಇದೆಲ್ಲಾ ಊಹಾಪೋಹಗಳು ಅಷ್ಟೇ ಎಂದು ತಿಳಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟವನ್ನು ಮಣಿಸುವ ಉದ್ದೇಶದಿಂದ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವೆಲಪ್ಮೆಂಟಾಲ್ ಇನ್ ಕ್ಲೂಸಿವ್ ಅಲಯನ್ಸ್ (Indian National Developmental Inclusive Alliance) ಎಂದು ನಾಮಕರಣ ಮಾಡಿದ್ದು, ಈ 26 ಪಕ್ಷಗಳ ನಾಯಕರು ಮೋದಿಯನ್ನು ಸೋಲಿಸಲಿಕ್ಕೆ ಒಗ್ಗಟ್ಟಿನಿಂದ ಕೆಲಸಮಾಡಲಿದ್ದಾರೆ ಎಂದು ತಿಳಿಸಿದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…