ಅವಕಾಶವಾದಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶವಿಲ್ಲ- ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ

ಅವಕಾಶವಾದಿಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅವಕಾಶವಿಲ್ಲ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಯಾರು ಬೇಕಾದರೂ ಸೇರ್ಪಡೆಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದವರಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಬಾಗಿಲು ತಟ್ಟಿದ್ದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಅವಕಾಶಗಳಿಗೋಸ್ಕರ ಕಾಂಗ್ರೆಸ್ ಪಕ್ಷವನ್ನ ಸೇರುವವರಿಗೆ ಪಕ್ಷದಲ್ಲಿ ಎಂದೂ ಮಣೆ ಹಾಕುವುದಿಲ್ಲ. ಅವರ ಅನುಕೂಲ ಸಿದ್ಧವಾಗಿ ನಮ್ಮ ಪಕ್ಷ ಇಲ್ಲ. ಪಕ್ಷಕ್ಕೆ ಬಂದ ಮೇಲೆ ಸಿದ್ಧಾಂತದ ಮೇಲೆ ನಿಲ್ಲ ಬೇಕಾಗುತ್ತದೆ. ಬರೀ ಅವಕಾಶಕ್ಕೆ ಬರೋವವರಿಗೆ ಪಕ್ಷದಲ್ಲಿ ಸ್ಥಾನ ಇಲ್ಲ. ಸದ್ಯ ನನ್ನ ಸಂಪರ್ಕದಲ್ಲಿ ಯಾವುದೇ ಬಿಜೆಪಿ-ಜೆಡಿಎಸ್ ಶಾಸಕರು ಇಲ್ಲ ಎಂದರು.

ಕಾಂಗ್ರೆಸ್ ಸರ್ಕಾರ 6 ತಿಂಗಳೊಳಗೆ ಬೀಳುತ್ತದೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರಿಗೆ ಮುಖ್ಯಮಂತ್ರಿ ಆಗೋ ಆತುರ, ಅವರು ಈ ಜನ್ಮದಲ್ಲಿ ಮುಖ್ಯಮಂತ್ರಿ ಆಗೋ ಭರವಸೆ ಇಲ್ಲ. ಅವರನ್ನು ಅವರ ಪಕ್ಷದಲ್ಲೇ ಗಂಭೀರವಾಗಿ ತೆಗೆದುಕೊಂಡಿಲ್ಲ, ಇನ್ನು ನಾವು ತೆಗೆದುಕೊಳ್ಳಲಾಗುತ್ತದೆಯೇ..? ಇದೆಲ್ಲಾ ಊಹಾಪೋಹಗಳು ಅಷ್ಟೇ ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಒಕ್ಕೂಟವನ್ನು ಮಣಿಸುವ ಉದ್ದೇಶದಿಂದ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವೆಲಪ್​ಮೆಂಟಾಲ್​​ ಇನ್ ಕ್ಲೂಸಿವ್​ ಅಲಯನ್ಸ್ (Indian National Developmental Inclusive Alliance)​ ಎಂದು ನಾಮಕರಣ ಮಾಡಿದ್ದು, ಈ 26 ಪಕ್ಷಗಳ ನಾಯಕರು ಮೋದಿಯನ್ನು ಸೋಲಿಸಲಿಕ್ಕೆ ಒಗ್ಗಟ್ಟಿನಿಂದ ಕೆಲಸಮಾಡಲಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago