ಅವರೆ ಒಂದು ಉಷ್ಣ ವಲಯದ ದ್ವಿದಳ ಧಾನ್ಯ ಬೆಳೆಯಾಗಿದ್ದು, ತರಕಾರಿ ಹಾಗೂ ಕಾಳಿಗಾಗಿ ಬೆಳೆಯಲಾಗುತ್ತದೆ. ನಮ್ಮ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಅವರೆಯನ್ನು ರಾಗಿ ಬೆಳೆಯೊಂದಿಗೆ ಅಂತರ ಬೆಳೆಯಾಗಿ ಬೆಳೆಯುವುದು ವಾಡಿಕೆ.
ಇತ್ತೀಚಿನ ದಿನಗಳಲ್ಲಿ ಕಡಿಮೆ ಅವಧಿಯ ಹಾಗೂ ವರ್ಷವಿಡೀ ಬೆಳೆಯಬಹುದಾದ ತಳಿಗಳನ್ನು ಅಭಿವೃದ್ಧಿಪಡಿಸಿರುವುದರಿಂದ ಅವರೆ ಬೆಳೆಯನ್ನು ಮುಖ್ಯ ಬೆಳೆಯಾಗಿ ಬೆಳೆಯುವುದು ಹೆಚ್ಚಾಗಿ ಕಂಡುಬರುತ್ತಿದೆ.
100ಗ್ರಾಂ ಹಸಿ ಅವರೆ ಕಾಳಿನಲ್ಲಿ 6.7 ಗ್ರಾಂ ಕಾರ್ಬೋಹೈಡ್ರೇಟ್, 3.8ಗ್ರಾಂ ಪ್ರೋಟೀನ್, 1.8 ಗ್ರಾಂ ನಷ್ಟು ನಾರಿನಾಂಶ, 210 ಮಿ.ಗ್ರಾಂ ಕ್ಯಾಲ್ಸಿಯಂ, 6.8 ಮಿ. ಗ್ರಾಂ ರಂಜಕ, 1.7 ಮಿ.ಗ್ರಾಂ ಕಬ್ಬಿಣಾಂಶ ದೊರೆಯುತ್ತದೆ.
*ತಳಿ- ಹೆಚ್.ಎ3
ಬಿತ್ತನೆ ಕಾಲ- ಮುಂಗಾರು (ಆಗಸ್ಟ್), ಹಿಂಗಾರು (ಅಕ್ಟೋಬರ್)
ಕಾಲಾವಧಿ- 90-100
ಇಳುವರಿ ಧಾನ್ಯ ಕಾಳು- 3-4
ವಿಶೇಷ ಗುಣ- ವರ್ಷವಿಡೀ ಬೆಳೆಯಬಹುದು
*ತಳಿ ಹೆಸರು-ಹೆಚ್.ಎ4
ಬಿತ್ತನೆ ಕಾಲ- ಮುಂಗಾರು (ಆಗಸ್ಟ್), ಹಿಂಗಾರು (ಅಕ್ಟೋಬರ್)
ಕಾಲಾವಧಿ- 95-100
ಇಳುವರಿ ಧಾನ್ಯ ಕಾಳು- ಹಸಿಕಾಯಿ 12-15
ವಿಶೇಷ ಗುಣ- ವರ್ಷವಿಡೀ ಬೆಳೆಯಬಹುದು
*ತಳಿ ಹೆಸರು-ಹೆಚ್.ಎ5
ಬಿತ್ತನೆ ಕಾಲ- ಬೇಸಿಗೆ(ಫೆಬ್ರವರಿ-ಮಾರ್ಚ್)
ಕಾಲಾವಧಿ-90-95
ನೀರು ಸರಾಗವಾಗಿ ಬಸಿದು ಹೋಗುವಂತಹ ಸಾಮರ್ಥ್ಯ ಹೊಂದಿರುವ ಭೂಮಿ ಉತ್ತಮ. ಬಿತ್ತನೆಗೆ ಮುಂಚೆ ಜೀವಾಣು ಗೊಬ್ಬರಗಳಿಂದ ಲೇಪನ ಮಾಡಿ ನೆರಳಿನಲ್ಲಿ ಒಣಗಿಸಿದ ನಂತರ ಬಿತ್ತನೆ ಮಾಡುವುದು. ಈ ರೀತಿ ಮಾಡುವುದರಿಂದ ರಾಸಾಯನಿಕ ಗೊಬ್ಬರಗಳಾದ ಯೂರಿಯಾ ಮತ್ತು ಡಿಎಪಿಯನ್ನು ಕಡಿಮೆಗೊಳಿಸಬಹುದು.
ಬಿತ್ತನೆ ವಿಧಾನ
ಒಂದೂವರೆಯಿಂದ ಎರಡು ಅಡಿ ಅಂತರದ ಸಾಲುಗಳಲ್ಲಿ ಬೀಜದಿಂದ ಬೀಜಕ್ಕೆ ಅರ್ಧ ಅಡಿ ಅಂತರದಂತೆ ಬಿತ್ತನೆ ಮಾಡುವುದು. ಬೀಜವನ್ನು1-2 ಅಂಗುಲಕ್ಕಿಂತ ಹೆಚ್ಚಿನ ಆಳಕ್ಕೆ ಬೀಳದಂತೆ ಬಿತ್ತನೆ ಮಾಡಬೇಕು.
ಅಂತರ ಬೇಸಾಯ
ಬಿತ್ತಿದ ಸುಮಾರು 30-35 ದಿನಗಳಲ್ಲಿ ಸಸಿಗಳಿಗೆ ಮಣ್ಣು ಏರು ಹಾಕಬೇಕಾಗುತ್ತದೆ. 2-3 ಬಾರಿ ಅಂತರ ಬೇಸಾಯ ಮಾಡುವುದರಿಂದ ಸಸಿಗಳು ಮುಂದೆ ಬೀಜಕೋಶಗಳ ಭಾರದಿಂದ ನೆಲಕ್ಕೆ ಬೀಳುವುದನ್ನು ತಪ್ಪಿಸಬಹುದು.
ನೀರು ನಿರ್ವಹಣೆ
ಮಣ್ಣಿನ ಗುಣಗಳಿಗನುಸಾರವಾಗಿ ಅಗತ್ಯಕ್ಕೆ ತಕ್ಕಂತೆ ನೀರನ್ನು ಹಾಯಿಸಬೇಕು. ಹೆಚ್ಚಿನ ಇಳುವರಿ ಪಡೆಯಲು ಬೆಳೆಯ ಮುಖ್ಯ ಹಂತಗಳಾದ ಬಿತ್ತನೆ ಸಮಯ, ಮೊಗ್ಗಾಗುವಾಗ, ಹೂವು ಹಾಗೂ ಕಾಳು ಕಟ್ಟುವಾಗ ನೀರಿನಲ್ಲಿ ಅಭಾವ ಆಗದಂತೆ ನೋಡಿಕೊಳ್ಳಬೇಕು.
ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಈ ರೋಗವನ್ನು ಹತೋಟಿಗೆ ತರಲು ಮ್ಯಾಂಕೋಜೆನ್ 75 ಡಬ್ಲ್ಯೂಪಿನ್ನು 2.5ಗ್ರಾಂ ಪ್ರತಿ ಲೀಟರ್ ಗೆ ಅಥವಾ ಕಾರ್ಬೆಂಡಜಿಂ 50 ಡಬ್ಲ್ಯೂ ಪಿ 1.0 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಎಕರೆಗೆ 200 ಲೀ. ಸಿಂಪಡಣೆ ದ್ರಾವಣವನ್ನು ಬಳಸಬೇಕು.
ನಂಜುರೋಗ ಮುಂಗಾರಿನಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯ. ಇದು ಎಲೆಗಳ ಕಾಂತಿ ಹೀನಗೊಳಿಸುತ್ತದೆ ಹಾಗೂ ಹೂವು ಸರಿಯಾಗಿ ಬಿಡುವುದಿಲ್ಲ. ಹತೋಟಿಗೆ ಬರದಿದ್ದಲ್ಲಿ ರೋಗ ಪೀಡಿತ ಗಿಡಗಳನ್ನು ಕಿತ್ತು ನಾಶಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಕೃಷಿ ವಿಜ್ಞಾನ ಕೇಂದ್ರ, ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯವನ್ನು ಸಂಪರ್ಕಿಸಿ.
Mastercard is just one of one of the most widely approved and relied on payment…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
When it involves on-line gambling enterpris padişahbet günceles, among one of the most tempting deals…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…