ಅವರೆ ಒಂದು ಉಷ್ಣ ವಲಯದ ದ್ವಿದಳ ಧಾನ್ಯ ಬೆಳೆಯಾಗಿದ್ದು, ತರಕಾರಿ ಹಾಗೂ ಕಾಳಿಗಾಗಿ ಬೆಳೆಯಲಾಗುತ್ತದೆ. ನಮ್ಮ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಅವರೆಯನ್ನು ರಾಗಿ ಬೆಳೆಯೊಂದಿಗೆ ಅಂತರ ಬೆಳೆಯಾಗಿ ಬೆಳೆಯುವುದು ವಾಡಿಕೆ.
ಇತ್ತೀಚಿನ ದಿನಗಳಲ್ಲಿ ಕಡಿಮೆ ಅವಧಿಯ ಹಾಗೂ ವರ್ಷವಿಡೀ ಬೆಳೆಯಬಹುದಾದ ತಳಿಗಳನ್ನು ಅಭಿವೃದ್ಧಿಪಡಿಸಿರುವುದರಿಂದ ಅವರೆ ಬೆಳೆಯನ್ನು ಮುಖ್ಯ ಬೆಳೆಯಾಗಿ ಬೆಳೆಯುವುದು ಹೆಚ್ಚಾಗಿ ಕಂಡುಬರುತ್ತಿದೆ.
100ಗ್ರಾಂ ಹಸಿ ಅವರೆ ಕಾಳಿನಲ್ಲಿ 6.7 ಗ್ರಾಂ ಕಾರ್ಬೋಹೈಡ್ರೇಟ್, 3.8ಗ್ರಾಂ ಪ್ರೋಟೀನ್, 1.8 ಗ್ರಾಂ ನಷ್ಟು ನಾರಿನಾಂಶ, 210 ಮಿ.ಗ್ರಾಂ ಕ್ಯಾಲ್ಸಿಯಂ, 6.8 ಮಿ. ಗ್ರಾಂ ರಂಜಕ, 1.7 ಮಿ.ಗ್ರಾಂ ಕಬ್ಬಿಣಾಂಶ ದೊರೆಯುತ್ತದೆ.
*ತಳಿ- ಹೆಚ್.ಎ3
ಬಿತ್ತನೆ ಕಾಲ- ಮುಂಗಾರು (ಆಗಸ್ಟ್), ಹಿಂಗಾರು (ಅಕ್ಟೋಬರ್)
ಕಾಲಾವಧಿ- 90-100
ಇಳುವರಿ ಧಾನ್ಯ ಕಾಳು- 3-4
ವಿಶೇಷ ಗುಣ- ವರ್ಷವಿಡೀ ಬೆಳೆಯಬಹುದು
*ತಳಿ ಹೆಸರು-ಹೆಚ್.ಎ4
ಬಿತ್ತನೆ ಕಾಲ- ಮುಂಗಾರು (ಆಗಸ್ಟ್), ಹಿಂಗಾರು (ಅಕ್ಟೋಬರ್)
ಕಾಲಾವಧಿ- 95-100
ಇಳುವರಿ ಧಾನ್ಯ ಕಾಳು- ಹಸಿಕಾಯಿ 12-15
ವಿಶೇಷ ಗುಣ- ವರ್ಷವಿಡೀ ಬೆಳೆಯಬಹುದು
*ತಳಿ ಹೆಸರು-ಹೆಚ್.ಎ5
ಬಿತ್ತನೆ ಕಾಲ- ಬೇಸಿಗೆ(ಫೆಬ್ರವರಿ-ಮಾರ್ಚ್)
ಕಾಲಾವಧಿ-90-95
ನೀರು ಸರಾಗವಾಗಿ ಬಸಿದು ಹೋಗುವಂತಹ ಸಾಮರ್ಥ್ಯ ಹೊಂದಿರುವ ಭೂಮಿ ಉತ್ತಮ. ಬಿತ್ತನೆಗೆ ಮುಂಚೆ ಜೀವಾಣು ಗೊಬ್ಬರಗಳಿಂದ ಲೇಪನ ಮಾಡಿ ನೆರಳಿನಲ್ಲಿ ಒಣಗಿಸಿದ ನಂತರ ಬಿತ್ತನೆ ಮಾಡುವುದು. ಈ ರೀತಿ ಮಾಡುವುದರಿಂದ ರಾಸಾಯನಿಕ ಗೊಬ್ಬರಗಳಾದ ಯೂರಿಯಾ ಮತ್ತು ಡಿಎಪಿಯನ್ನು ಕಡಿಮೆಗೊಳಿಸಬಹುದು.
ಬಿತ್ತನೆ ವಿಧಾನ
ಒಂದೂವರೆಯಿಂದ ಎರಡು ಅಡಿ ಅಂತರದ ಸಾಲುಗಳಲ್ಲಿ ಬೀಜದಿಂದ ಬೀಜಕ್ಕೆ ಅರ್ಧ ಅಡಿ ಅಂತರದಂತೆ ಬಿತ್ತನೆ ಮಾಡುವುದು. ಬೀಜವನ್ನು1-2 ಅಂಗುಲಕ್ಕಿಂತ ಹೆಚ್ಚಿನ ಆಳಕ್ಕೆ ಬೀಳದಂತೆ ಬಿತ್ತನೆ ಮಾಡಬೇಕು.
ಅಂತರ ಬೇಸಾಯ
ಬಿತ್ತಿದ ಸುಮಾರು 30-35 ದಿನಗಳಲ್ಲಿ ಸಸಿಗಳಿಗೆ ಮಣ್ಣು ಏರು ಹಾಕಬೇಕಾಗುತ್ತದೆ. 2-3 ಬಾರಿ ಅಂತರ ಬೇಸಾಯ ಮಾಡುವುದರಿಂದ ಸಸಿಗಳು ಮುಂದೆ ಬೀಜಕೋಶಗಳ ಭಾರದಿಂದ ನೆಲಕ್ಕೆ ಬೀಳುವುದನ್ನು ತಪ್ಪಿಸಬಹುದು.
ನೀರು ನಿರ್ವಹಣೆ
ಮಣ್ಣಿನ ಗುಣಗಳಿಗನುಸಾರವಾಗಿ ಅಗತ್ಯಕ್ಕೆ ತಕ್ಕಂತೆ ನೀರನ್ನು ಹಾಯಿಸಬೇಕು. ಹೆಚ್ಚಿನ ಇಳುವರಿ ಪಡೆಯಲು ಬೆಳೆಯ ಮುಖ್ಯ ಹಂತಗಳಾದ ಬಿತ್ತನೆ ಸಮಯ, ಮೊಗ್ಗಾಗುವಾಗ, ಹೂವು ಹಾಗೂ ಕಾಳು ಕಟ್ಟುವಾಗ ನೀರಿನಲ್ಲಿ ಅಭಾವ ಆಗದಂತೆ ನೋಡಿಕೊಳ್ಳಬೇಕು.
ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಈ ರೋಗವನ್ನು ಹತೋಟಿಗೆ ತರಲು ಮ್ಯಾಂಕೋಜೆನ್ 75 ಡಬ್ಲ್ಯೂಪಿನ್ನು 2.5ಗ್ರಾಂ ಪ್ರತಿ ಲೀಟರ್ ಗೆ ಅಥವಾ ಕಾರ್ಬೆಂಡಜಿಂ 50 ಡಬ್ಲ್ಯೂ ಪಿ 1.0 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಎಕರೆಗೆ 200 ಲೀ. ಸಿಂಪಡಣೆ ದ್ರಾವಣವನ್ನು ಬಳಸಬೇಕು.
ನಂಜುರೋಗ ಮುಂಗಾರಿನಲ್ಲಿ ಕಾಣಿಸಿಕೊಳ್ಳುವುದು ಸಾಮಾನ್ಯ. ಇದು ಎಲೆಗಳ ಕಾಂತಿ ಹೀನಗೊಳಿಸುತ್ತದೆ ಹಾಗೂ ಹೂವು ಸರಿಯಾಗಿ ಬಿಡುವುದಿಲ್ಲ. ಹತೋಟಿಗೆ ಬರದಿದ್ದಲ್ಲಿ ರೋಗ ಪೀಡಿತ ಗಿಡಗಳನ್ನು ಕಿತ್ತು ನಾಶಪಡಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಕೃಷಿ ವಿಜ್ಞಾನ ಕೇಂದ್ರ, ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯವನ್ನು ಸಂಪರ್ಕಿಸಿ.
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…