ಕಾರ್ಮಿಕರು, ರೈತರು, ಬಡವರು, ವಿದ್ಯಾವಂತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಾಳೆ(ಏ.17) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ಪ್ರಶ್ನಿಸಿದರು.
ಪ್ರತಿಭಟನೆಗೆ ತಾಲೂಕಿನಿಂದ ಸುಮಾರು 60 ಬಸ್ ಗಳು ಹೊರಡಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.
ಈ ವೇಳೆ ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಭೂ ನ್ಯಾಯ ಮಂಡಳಿ ಸದಸ್ಯ ಆದಿತ್ಯಾ ನಾಗೇಶ್, ಅಂಜನಮೂರ್ತಿ, ಚುಂಚೇಗೌಡ, ಮಮತಾ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…