ಕಾರ್ಮಿಕರು, ರೈತರು, ಬಡವರು, ವಿದ್ಯಾವಂತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಸರ್ಕಾರ ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಾಳೆ(ಏ.17) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ? ಎಂದು ಪ್ರಶ್ನಿಸಿದರು.
ಪ್ರತಿಭಟನೆಗೆ ತಾಲೂಕಿನಿಂದ ಸುಮಾರು 60 ಬಸ್ ಗಳು ಹೊರಡಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದರು.
ಈ ವೇಳೆ ನಗರ ಬ್ಲಾಕ್ ಅಧ್ಯಕ್ಷ ಜಗನ್ನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಭೂ ನ್ಯಾಯ ಮಂಡಳಿ ಸದಸ್ಯ ಆದಿತ್ಯಾ ನಾಗೇಶ್, ಅಂಜನಮೂರ್ತಿ, ಚುಂಚೇಗೌಡ, ಮಮತಾ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…