ಅವೈಜ್ಞಾನಿಕವಾಗಿ ನಡು ರಸ್ತೆಯಲ್ಲೇ ವಿದ್ಯುತ್ ಪರಿವರ್ತಕ, ವಿದ್ಯುತ್ ಕಂಬಗಳ ಅಳವಡಿಕೆ: ಸ್ಥಳಂತರಿಸುವಂತೆ ಗ್ರಾಮಸ್ಥರ ಆಗ್ರಹ: ಕ್ಯಾರೆ ಎನ್ನದ ಅಧಿಕಾರಿಗಳು

ತಾಲೂಕಿನ ಮಧುರೆ ಹೋಬಳಿಯ ಚೆನ್ನಾದೇವಿ ಅಗ್ರಹಾರ ಗ್ರಾಮ‌‌ ಪಂಚಾಯಿತಿ‌ ವ್ಯಾಪ್ತಿಯ ಮಲ್ಲೋಹಳ್ಳಿ(11ಮೈಲಿ) ಕಾಲೋನಿಯಲ್ಲಿ ಹಲವು ಸಮಸ್ಯೆಗಳು ತಾಂಡವಾಡುತ್ತಿವೆ. ಈ ಸಮಸ್ಯೆಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳ ಕಣ್ಣಿಗೆ ಕಂಡರೂ… ಜಾಣಕುರುಡರಂತೆ ವರ್ತನೆ ಮಾಡುತ್ತಿದ್ದಾರೆ.

ಆಶ್ರಯ ಯೋಜನೆಯಡಿ 30 ವರ್ಷಗಳಿಂದೆ ಕಾಲೋನಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಸುಮಾರು 50 ಕುಟುಂಬಗಳು ವಾಸ ಮಾಡುತ್ತಿವೆ. ಇಲ್ಲಿ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಸೂಕ್ತವಾದ ರಸ್ತೆ ಇಲ್ಲ, ಒಂದು ಬೀದಿಯಲ್ಲಿ ರಸ್ತೆಯಲ್ಲೇ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ಇಲ್ಲಿನ ನಿವಾಸಿಗಳು ಜೀವ ಅಂಗೈಯಲ್ಲಿಟ್ಟುಕೊಂಡು ನಿತ್ಯ ವಿದ್ಯುತ್ ಪರಿವರ್ತಕ ಅಡಿಯಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೊಂದು ವಿದ್ಯುತ್ ಕಂಬಗಳು ಚರಂಡಿಯಲ್ಲೇ ಅಳವಡಿಸಲಾಗಿದೆ.

ಇನ್ನೊಂದು ಬೀದಿಯಲ್ಲಿ ವಿದ್ಯುತ್ ಕಂಬಗಳೇ ಇಲ್ಲ, ಇಲ್ಲಿನ‌ ನಿವಾಸಿಗಳು ರಾತ್ರಿವೇಳೆ ಕತ್ತಲಲ್ಲಿ ಓಡಾಡಬೇಕಾಗುತ್ತದೆ. ಇಡೀ ಬೀದಿಗೆ ಒಂದೆರಡು ಕಂಬಗಳು ಮಾತ್ರ ಇದ್ದು, ದೂರದ ವಿದ್ಯುತ್ ಕಂಬಗಳಿಂದ ಮನೆಗಳಿಗೆ ವಿದ್ಯುತ್ ಪಡೆಯಲಾಗಿದೆ. ಚರಂಡಿ‌ ಇದೆ ಆದರೆ, ಆ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವುದಿಲ್ಲ. ಚರಂಡಿಯಲ್ಲಿ ಗಿಡಗಂಟೆಗಳು ಬೆಳೆದು ನಿಂತಿವೆ. ಚರಂಡಿ ನೀರು ಗಬ್ಬೆದ್ದು ನಾರುತ್ತಿದ್ದು, ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರದ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ. ಮಳೆ‌ ಕಾರಣದಿಂದ ರಸ್ತೆಗಳೆಲ್ಲವೂ ಕೆಸರುಗದ್ದೆಯಂತಾಗಿವೆ. ಇನ್ನೂ ಹಲವಾರು ಸಮಸ್ಯೆಗಳು ಈ ಕಾಲೋನಿಯಲ್ಲಿ ಇವೆ. ಈ ಕುರಿತು ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಉಪಯೋಗವಾಗಿಲ್ಲ ಎಂದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.

ಈ ಕಾಲೋನಿಯಲ್ಲಿ ನಾವು ಸುಮಾರು 30 ವರ್ಷಗಳಿಂದ ವಾಸ ಮಾಡುತ್ತಿದ್ದೇವೆ. ಇಲ್ಲಿ ಸೂಕ್ತವಾದ ರಸ್ತೆಗಳಿಲ್ಲ. ಬೀದಿ ದೀಪಗಳಿಲ್ಲ, ಚರಂಡಿ ಇದ್ದರೂ ಇಲ್ಲದಂತಾಗಿದೆ. ಮಳೆ ಬಂದರೆ ಮನೆಯಿಂದ ಈಚೆ ಬರುವುದಕ್ಕೆ ಆಗುವುದಿಲ್ಲ. ಅಂಗನವಾಡಿ ಕೇಂದ್ರ ಇಲ್ಲ. ಇರುವ ರಸ್ತೆಯಲ್ಲೇ ಎರಡೆರಡು ವಿದ್ಯುತ್ ಪರಿವರ್ತಕ ಹಾಗೂ ಸುಮಾರು 7 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ನಾವು ಇದರ ಅಡಿಯಲ್ಲೇ ಓಡಾಡುತ್ತಿದ್ದೇವೆ. ಇದನ್ನು ಸ್ಥಳಂತರಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ನೀಡಲಾಗಿತ್ತು. ಆದರೆ ಅವರು ಪಂಚಾಯಿತಿ ಅಧಿಕಾರಿಗಳ ಬಳಿ ಕೇಳಿ ಎಂದು ಹೇಳುತ್ತಾರೆ. ಪಂಚಾಯಿತಿ ಅಧಿಕಾರಿಗಳ ಬಳಿ ಕೇಳಿದರೆ ನಮ್ಮಲ್ಲಿ ಅನುದಾನ ಇಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ. ಇದರಿಂದ 30 ವರ್ಷಗಳಿಂದ ನಾವು ತುಂಬಾ ಬೇಸತ್ತಿದ್ದೇವೆ. ದಯಮಾಡಿ ಕಾಲೋನಿಯಲ್ಲಿನ ಸಮಸ್ಯಗಳನ್ನು ಕೂಡಲೇ ಬಗೆಹರಿಸಿಕೊಡಬೇಕು ಎಂದು ಸಿದ್ದರಾಜು ಆಗ್ರಹಿಸಿದ್ದಾರೆ.

ಮಲ್ಲೋಹಳ್ಳಿ 11 ನೇ ಮೈಲಿಯ ಕಾಲೋನಿಯಲ್ಲಿನ ಚರಂಡಿಯಲ್ಲಿ ವಿದ್ಯುತ್ ಕಂಬವಿರುವುದರಿಂದ ಜನಸಾಮಾನ್ಯರಿಗೆ ಇದರಿಂದ ತುಂಬಾ ತೊಂದರೆಯಾಗಿರುತ್ತದೆ. ಆದ್ದರಿಂದ ತಕ್ಷಣ ವಿದ್ಯುತ್ ಕಂಬವನ್ನು ಸ್ಥಳಾಂತರಿಸಿಕೊಡಬೇಕೆಂದು ಕಸನವಾಡಿ ಶಾಖೆಯ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರವನ್ನು ಬರೆಯಲಾಗಿದೆ. ಪಂಚಾಯಿತಿಯಲ್ಲಿ ಅನುದಾನದ ಕೊರತೆ ಇದೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ಗ್ರಾಮ ಚೆನ್ನಾದೇವಿ ಅಗ್ರಹಾರ ಗ್ರಾಮ‌‌ ಪಂಚಾಯಿತಿ‌ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

9 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago