ಅವೈಜ್ಞಾನಿಕವಾಗಿ ನಡು ರಸ್ತೆಯಲ್ಲೇ ವಿದ್ಯುತ್ ಪರಿವರ್ತಕ, ವಿದ್ಯುತ್ ಕಂಬಗಳ ಅಳವಡಿಕೆ: ಸ್ಥಳಂತರಿಸುವಂತೆ ಗ್ರಾಮಸ್ಥರ ಆಗ್ರಹ: ಕ್ಯಾರೆ ಎನ್ನದ ಅಧಿಕಾರಿಗಳು

ತಾಲೂಕಿನ ಮಧುರೆ ಹೋಬಳಿಯ ಚೆನ್ನಾದೇವಿ ಅಗ್ರಹಾರ ಗ್ರಾಮ‌‌ ಪಂಚಾಯಿತಿ‌ ವ್ಯಾಪ್ತಿಯ ಮಲ್ಲೋಹಳ್ಳಿ(11ಮೈಲಿ) ಕಾಲೋನಿಯಲ್ಲಿ ಹಲವು ಸಮಸ್ಯೆಗಳು ತಾಂಡವಾಡುತ್ತಿವೆ. ಈ ಸಮಸ್ಯೆಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳ ಕಣ್ಣಿಗೆ ಕಂಡರೂ… ಜಾಣಕುರುಡರಂತೆ ವರ್ತನೆ ಮಾಡುತ್ತಿದ್ದಾರೆ.

ಆಶ್ರಯ ಯೋಜನೆಯಡಿ 30 ವರ್ಷಗಳಿಂದೆ ಕಾಲೋನಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ಸುಮಾರು 50 ಕುಟುಂಬಗಳು ವಾಸ ಮಾಡುತ್ತಿವೆ. ಇಲ್ಲಿ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಸೂಕ್ತವಾದ ರಸ್ತೆ ಇಲ್ಲ, ಒಂದು ಬೀದಿಯಲ್ಲಿ ರಸ್ತೆಯಲ್ಲೇ ವಿದ್ಯುತ್ ಪರಿವರ್ತಕ ಹಾಗೂ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ಇಲ್ಲಿನ ನಿವಾಸಿಗಳು ಜೀವ ಅಂಗೈಯಲ್ಲಿಟ್ಟುಕೊಂಡು ನಿತ್ಯ ವಿದ್ಯುತ್ ಪರಿವರ್ತಕ ಅಡಿಯಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೊಂದು ವಿದ್ಯುತ್ ಕಂಬಗಳು ಚರಂಡಿಯಲ್ಲೇ ಅಳವಡಿಸಲಾಗಿದೆ.

ಇನ್ನೊಂದು ಬೀದಿಯಲ್ಲಿ ವಿದ್ಯುತ್ ಕಂಬಗಳೇ ಇಲ್ಲ, ಇಲ್ಲಿನ‌ ನಿವಾಸಿಗಳು ರಾತ್ರಿವೇಳೆ ಕತ್ತಲಲ್ಲಿ ಓಡಾಡಬೇಕಾಗುತ್ತದೆ. ಇಡೀ ಬೀದಿಗೆ ಒಂದೆರಡು ಕಂಬಗಳು ಮಾತ್ರ ಇದ್ದು, ದೂರದ ವಿದ್ಯುತ್ ಕಂಬಗಳಿಂದ ಮನೆಗಳಿಗೆ ವಿದ್ಯುತ್ ಪಡೆಯಲಾಗಿದೆ. ಚರಂಡಿ‌ ಇದೆ ಆದರೆ, ಆ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವುದಿಲ್ಲ. ಚರಂಡಿಯಲ್ಲಿ ಗಿಡಗಂಟೆಗಳು ಬೆಳೆದು ನಿಂತಿವೆ. ಚರಂಡಿ ನೀರು ಗಬ್ಬೆದ್ದು ನಾರುತ್ತಿದ್ದು, ಇದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಸೊಳ್ಳೆಗಳ ಕಡಿತದಿಂದ ಡೆಂಗ್ಯೂ ಜ್ವರದ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ. ಮಳೆ‌ ಕಾರಣದಿಂದ ರಸ್ತೆಗಳೆಲ್ಲವೂ ಕೆಸರುಗದ್ದೆಯಂತಾಗಿವೆ. ಇನ್ನೂ ಹಲವಾರು ಸಮಸ್ಯೆಗಳು ಈ ಕಾಲೋನಿಯಲ್ಲಿ ಇವೆ. ಈ ಕುರಿತು ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಉಪಯೋಗವಾಗಿಲ್ಲ ಎಂದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.

ಈ ಕಾಲೋನಿಯಲ್ಲಿ ನಾವು ಸುಮಾರು 30 ವರ್ಷಗಳಿಂದ ವಾಸ ಮಾಡುತ್ತಿದ್ದೇವೆ. ಇಲ್ಲಿ ಸೂಕ್ತವಾದ ರಸ್ತೆಗಳಿಲ್ಲ. ಬೀದಿ ದೀಪಗಳಿಲ್ಲ, ಚರಂಡಿ ಇದ್ದರೂ ಇಲ್ಲದಂತಾಗಿದೆ. ಮಳೆ ಬಂದರೆ ಮನೆಯಿಂದ ಈಚೆ ಬರುವುದಕ್ಕೆ ಆಗುವುದಿಲ್ಲ. ಅಂಗನವಾಡಿ ಕೇಂದ್ರ ಇಲ್ಲ. ಇರುವ ರಸ್ತೆಯಲ್ಲೇ ಎರಡೆರಡು ವಿದ್ಯುತ್ ಪರಿವರ್ತಕ ಹಾಗೂ ಸುಮಾರು 7 ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ನಾವು ಇದರ ಅಡಿಯಲ್ಲೇ ಓಡಾಡುತ್ತಿದ್ದೇವೆ. ಇದನ್ನು ಸ್ಥಳಂತರಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ನೀಡಲಾಗಿತ್ತು. ಆದರೆ ಅವರು ಪಂಚಾಯಿತಿ ಅಧಿಕಾರಿಗಳ ಬಳಿ ಕೇಳಿ ಎಂದು ಹೇಳುತ್ತಾರೆ. ಪಂಚಾಯಿತಿ ಅಧಿಕಾರಿಗಳ ಬಳಿ ಕೇಳಿದರೆ ನಮ್ಮಲ್ಲಿ ಅನುದಾನ ಇಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾರೆ. ಇದರಿಂದ 30 ವರ್ಷಗಳಿಂದ ನಾವು ತುಂಬಾ ಬೇಸತ್ತಿದ್ದೇವೆ. ದಯಮಾಡಿ ಕಾಲೋನಿಯಲ್ಲಿನ ಸಮಸ್ಯಗಳನ್ನು ಕೂಡಲೇ ಬಗೆಹರಿಸಿಕೊಡಬೇಕು ಎಂದು ಸಿದ್ದರಾಜು ಆಗ್ರಹಿಸಿದ್ದಾರೆ.

ಮಲ್ಲೋಹಳ್ಳಿ 11 ನೇ ಮೈಲಿಯ ಕಾಲೋನಿಯಲ್ಲಿನ ಚರಂಡಿಯಲ್ಲಿ ವಿದ್ಯುತ್ ಕಂಬವಿರುವುದರಿಂದ ಜನಸಾಮಾನ್ಯರಿಗೆ ಇದರಿಂದ ತುಂಬಾ ತೊಂದರೆಯಾಗಿರುತ್ತದೆ. ಆದ್ದರಿಂದ ತಕ್ಷಣ ವಿದ್ಯುತ್ ಕಂಬವನ್ನು ಸ್ಥಳಾಂತರಿಸಿಕೊಡಬೇಕೆಂದು ಕಸನವಾಡಿ ಶಾಖೆಯ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರವನ್ನು ಬರೆಯಲಾಗಿದೆ. ಪಂಚಾಯಿತಿಯಲ್ಲಿ ಅನುದಾನದ ಕೊರತೆ ಇದೆ. ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುವುದು ಎಂದು ಗ್ರಾಮ ಚೆನ್ನಾದೇವಿ ಅಗ್ರಹಾರ ಗ್ರಾಮ‌‌ ಪಂಚಾಯಿತಿ‌ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ತಿಳಿಸಿದರು.

Ramesh Babu

Journalist

Recent Posts

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

2 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

14 hours ago

860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…

14 hours ago

ಸಿಎಂ ಕುರ್ಚಿ ಕದನ ವಿಚಾರ ಈ ತಿಂಗಳೊಳಗೆ ಪೈಸ್ಲಾಗುತ್ತೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…

15 hours ago

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

17 hours ago