ವೈಜ್ಞಾನಿಕ ತಳಹದಿ ಇಲ್ಲದೆ ಚರಂಡಿ ಕಾಮಗಾರಿ ಮಾಡಿದ್ದು, ಸರಾಗವಾಗಿ ಹರಿಯಬೇಕಿದ್ದ ಚರಂಡಿ ನೀರು ಮನೆಗಳಲ್ಲಿರುವ ಸಂಪುಗಳಲ್ಲಿ ಜನಿಯುತ್ತಿವೆ. ಮಳೆ ಸುರಿದರಂತೂ ಚರಂಡಿಯಲ್ಲಿ ಹರಿಯಬೇಕಾದ ನೀರು ಮನೆಗಳಿಗೆ ನುಗ್ಗುವುದು ಒಂದೆಡೆಯಾದರೆ, ಸರ್ಕಾರಿ ರಸ್ತೆ ಒತ್ತುವರಿಯಾಗಿ ಸಂಚರಿಸಲು ಒತ್ತುವರಿದಾರರ ಬಳಿ ಅನುಮತಿ ಪಡೆಯಬೇಕಾದ ಪರಿಸ್ಥಿತಿ ಇದೆ.
ಇಂತಹ ಸಮಸ್ಯೆಯನ್ನು ಎದುರಿಸುತ್ತಿರುವುದು ದೊಡ್ಡಬಳ್ಳಾಪುರ ನಗರದ ಏಳನೆಯ ವಾರ್ಡ್ ಶ್ರೀನಗರ ನಿವಾಸಿಗಳು.
ಈ ಕುರಿತು ಶ್ರೀನಗರ ನಿವಾಸಿಯಾದ ಮನು ಅವರು ಮಾತನಾಡಿ, ವೈಜ್ಞಾನಿಕವಾದ ಯೋಜನೆ ಇಲ್ಲದೆ ಮಾಡಿರುವ ಚರಂಡಿ ಕಾಮಗಾರಿಯಿಂದಾಗಿ ನೀರು ಸರಾಗವಾಗಿ ಹರಿಯದೆ ನಿಂತಲ್ಲೇ ನಿಂತು ಮನೆಗಳಲ್ಲಿರುವ ಸಂಪುಗಳಲ್ಲಿ ಜನಿದು ಸಂಪಿನ ನೀರು ಕೊಳಚೆಯಾಗುತ್ತಿದೆ, ಮಳೆ ನೀರು ಹೆಚ್ಚಾದರೆ ಚರಂಡಿ ತುಂಬಿ ಮನೆಗಳಿಗೆ ನುಗ್ಗತ್ತದೆ, ಸೊಳ್ಳೆಗಳ ಕಾಟ ತಡೆಯಲಾಗುತ್ತಿಲ್ಲ, ರಸ್ತೆ ಒತ್ತುವರಿ ಮಾಡಿ ಕೊಂಡಿರುವವರ ಬಳಿ ಅನುಮತಿ ಪಡೆದು ಸಂಚಾರ ಮಾಡುವ ಪರಿಸ್ಥಿತಿ ಇದ್ದು ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.
ಮತ್ತೊಬ್ಬ ನಿವಾಸಿ ಅರುಣ್ ಕುಮಾರ್ ಮಾತನಾಡಿ, ಚರಂಡಿ ನೀರು ಸರಾಗವಾಗಿ ಹರಿಯದೆ, ಮಕ್ಕಳು ವೃದ್ದರು ಕಾಯಿಲೆಯಿಂದ ಬಳಲುವ ಪರಿಸ್ಥಿತಿ ಇದೆ, ತಿಂಗಳಲ್ಲಿ ಎರಡು ಬಾರಿ ಒಳ ಚರಂಡಿ ಕಟ್ಡಿ ಕೊಳ್ಳುತ್ತದೆ, ಈ ಬಗ್ಗೆ ಯಾರೂ ತಲೆ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನೂ 80 ಅಡಿಗಳ ಹಳೆ ಮಧುಗಿರಿ ರಸ್ತೆಯನ್ನು ಹಲವರು ಒತ್ತುವರಿ ಮಾಡಿಕೊಂಡಿದ್ದು, ಇದು ನಮ್ಮ ನಿವೇಶನ ಎಂದು ಸೈಜು ಕಲ್ಲನ್ನು ನೆಟ್ಟಿದ್ದಾರೆ, ಅದರಿಂದಾಗಿ ರಸ್ತೆಯಲ್ಲಿ ಒಡಾಡುವ ಮಕ್ಕಳು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ.
ನಮ್ಮ ಸಮಸ್ಯೆಗಳು ಹೇಳತೀರದಾಗಿದೆ ಎಂದು ಅಳಲು ತೋಡಿಕೊಂಡ ಅವರು, ಇನ್ನಾದರೂ ಕಂದಾಯ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು ನಮ್ಮ ಸಮಸ್ಯೆಗಳನ್ನು ಬಗೆ ಹರಿಸಿ ಕೊಡಬೇಕು ಎಂದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…