ಅಸಹಾಯಕ ವೃದ್ಧೆಗೆ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಪಿಎಸ್ಐ ನಂಜುಂಡಯ್ಯ

ತನ್ನ ಕುಟುಂಬವನ್ನ ಕಳೆದುಕೊಂಡ ವೃದ್ಧೆ ಹಾದಿ ಬೀದಿಯಲ್ಲಿ ಬೇಡಿ ತಿನ್ನುತ್ತಾ, ರಸ್ತೆ ಬದಿಯಲ್ಲಿ ಕೂತು ಕಂಡ ಕಂಡವರನ್ನ ಸಹಾಯ ಕೇಳಿ ಪರದಾಡುತ್ತಿದ್ದ ವೃದ್ದೆಯನ್ನ ಗಸ್ತಿನಲ್ಲಿದ್ದ ಪೊಲೀಸ್ ಅಧಿಕಾರಿ ಕಂಡು ವೃದ್ದೆಗೆ ಸಹಾಯ ಹಸ್ತ ನೀಡಿದ್ದಾರೆ… ಅಸಹಾಯಕ ವೃದ್ದೆಗೆ ಸಹಾಯ ಹಸ್ತ ನೀಡಿದ್ದರಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು…  ಶ್ರೀರಂಗಪಟ್ಟಣದ ಮೂಲದ ಲಕ್ಷ್ಮಮ್ಮ ಎಂಬ ಮಹಿಳೆ ಮೂವತ್ತು ವರ್ಷದ ಹಿಂದೆ ಚಿಕ್ಕಬಳ್ಳಾಪುರಕ್ಕೆ ವಲಸೆ ಬಂದು ನಿಮ್ಮಕಲಕುಂಟೆ ಗ್ರಾಮದಲ್ಲಿ ವಾಸವಾಗಿರ್ತಾಳೆ. ಇತ್ತೀಚೆಗೆ ಗಂಡ ಮಕ್ಕಳು ತೀರಿ ಹೋಗಿದ್ದು, ಮನೆ ಮಠ ಇಲ್ಲದೆ ಕೂಲಿ ನಾಲಿ ಮಾಡಿ ಹೊಟ್ಟೆ ತುಂಬಿಸಿಕೊಂಡು ದೇವಸ್ಥಾನದ ಅವರಣದಲ್ಲಿ ಜೀವನ ಮಾಡ್ತಿದ್ದಳು. ಕಾಲ ಕಳೆದಂತೆ ವಯಸ್ಸಾಗಿ ದುಡಿಯಲು ಕೈಲಾಗದೆ ಬೇಡಿ ತಿನ್ನುತ್ತಾ ಜೀವನ ಸಾಗಿಸುತ್ತಿದ್ದಳು. ಕಂಡ ಕಂಡವರ ಬಳಿ ಸಹಾಯ ಮಾಡುವಂತೆ ಅಂಗಲಾಚುತ್ತಿದ್ದಳು. ಈ ವೃದ್ಧಿ ಅಸಹಾಯಕತೆ ಕಂಡ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಂಜುಂಡಯ್ಯ, ಮಹಿಳೆಯ ಬಳಿ ಹೋಗಿ ವಿಚಾರಿಸಿದಾಗ, ಮಳೆ ಗಾಳಿಗೆ ರಸ್ತೆಯಲ್ಲಿ ಕೂರಲಾಗುತ್ತಿಲ್ಲ, ಜೊತೆಗೆ ಜೀವನ ಪರ್ಯಾಂತ ದುಡಿದ ಒಂದು ಲಕ್ಷ ಹಣ ಬಳಿ ಇದ್ದು, ದರೋಡೆಯ ಭಯದಿಂದ ಬದುಕಬೇಕಿದೆ ಎಂದು ಅಳಲು ತೋಡಿಕೊಂಡಿದ್ದಾಳೆ.

ಕೂಡಲೇ, ಪೊಲೀಸ್ ಅಧಿಕಾರಿ ಮಹಿಳೆ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದು ಆ ಹಣ ಖಾತೆಯಲ್ಲಿರಿಸಿದ್ದು,  ಶ್ರೀನಿವಾಸಪುರದ ಆಶ್ರಮವೊಂದರಲ್ಲಿ ವಿಚಾರಿಸಿ ಅಮ್ಮ ಆಂಬುಲೆನ್ಸ್ ಸಹಾಯದಿಂದ ಆಶ್ರಮಕ್ಕೆ ಕಳುಹಿಸಿ ಕೊಟ್ಟಿದ್ದಾರೆ…

PSI ನಂಜುಂಡಯ್ಯ ಮಾಡಿದ ಈ ಸಹಾಯಕ್ಕೆ ವೃತ್ತ ನಿರೀಕ್ಷಕ ಮಂಜುನಾಥ್ ಶ್ಲಾಘೀಸಿದ್ದಾರೆ…

ಇನ್ನು, ವೃದ್ದೆ ಈ ಹಿಂದೆ ವಾಸವಿದ್ದ ಸುತ್ತಮುತ್ತಲಿನ ಜನರು ಕುಟುಂಬದ ಸದಸ್ಯರನ್ನ ದೂರದ ಊರಿಗೆ ಕಳಿಸುವ ಹಾಗೆ ಕಣ್ಣೀರುಸುರಿಸಿ ಭಾವನಾತ್ಮಕ ಬೀಳ್ಕೊಡುಗೆ ಕೊಟ್ಟಿದ್ದು ನೋಡುಗರ ಕಣ್ಣಲ್ಲಿ ಕಣ್ಣೀರು ತರಿಸುವಂತಿತ್ತು..

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

6 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

6 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

9 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago