ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…