ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…