ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…