ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾನೇ ಸಿಎಂ ಆಗಬಹುದು ಎಂಬ ಹೇಳಿಕೆಗೆ ನ.27ರಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರಥ ಯಾತ್ರೆಯ ಸಂದರ್ಭದಲ್ಲಿ ಆಂಗ್ಲ ಭಾಷೆಯ ಖಾಸಗಿ ಚಾನೆಲ್ ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಸಿಎಂ ಇಬ್ರಾಹಿಂ ಅವರು ಸಿಎಂ ಏಕೆ ಆಗಬಾರದು ಅವರೇನು ಅಸ್ಪೃಶ್ಯರೆ ಎಂದು ಪ್ರಶ್ನೆ ಮಾಡುವ ಮೂಲಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ಅವಮಾನ ಮಾಡಿರುತ್ತಾರೆ. ಇದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ನೋವಿನ ವಿಚಾರವಾಗಿದೆ ಎಂದು ಕುಮಾರಸ್ವಾಮಿಯವರ ಅಸ್ಪೃಶ್ಯತೆ ಎಂಬ ಪದ ಬಳಕೆ ವಿರುದ್ಧ ದೊಡ್ಡಬಳ್ಳಾಪುರದ ಛಲವಾಧಿ ಮಹಾಸಭಾ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.
ಇಂತಹ ಹೇಳಿಕೆ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಸಾಬೀತು ಮಾಡಿದೆ, ಜೆಡಿಎಸ್ ಪಕ್ಷದ ಜಾತ್ಯತೀತ ಪದವನ್ನ ತೆಗೆದು ಜಾತಿವಾದಿ ಜೆಡಿಎಸ್ ಪಕ್ಷವೆಂದು ಹೆಸರು ಬದಲಾಯಿಸಿಕೊಳ್ಳಿ, ಕುಮಾರಸ್ವಾಮಿಯವರ ಅವಹೇಳನಕಾರಿ ಹೇಳಿಕೆ ಕಾನೂನು ಬಾಹಿರವಾಗಿದೆ, ಅವರು ಬೇಷರತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು, ಅಲ್ಲದೆ ಕುಮಾರಸ್ವಾಮಿಯವರ ವಿರುದ್ದ ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪ ನಿರೀಕ್ಷರ ಕಚೇರಿಯಲ್ಲಿ ದೂರು ನೀಡಿದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…