ಅಹಮದಾಬಾದ್ ವಿಮಾನ ದುರಂತ: ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಓರ್ವ ಪ್ರಯಾಣಿಕ

ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿತ್ತು. ಆದರೆ, ವಿಮಾನ Al-171 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಾಸ್‌ಕುಮಾರ್ ಬುಚರ್ವಾಡ ಭೀಕರ ಅಪಘಾತದಿಂದ ಪವಾಡಸದೃಶವಾಗಿ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನ ಪತನದ ಸಮಯದಲ್ಲಿ ಸೀಟ್ ನಂಬರ್ 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ವರದಿಯಾಗಿದೆ.

ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್‌ ಆಯುಕ್ತ ಜಿ.ಎಸ್. ಮಲಿಕ್ ಕೂಡ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪೊಲೀಸರು IIA ಸೀಟಿನಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಬದುಕುಳಿದ ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮಲಿಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *