ಅಹಮದಾಬಾದ್ ವಿಮಾನ ದುರಂತ: ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಓರ್ವ ಪ್ರಯಾಣಿಕ

ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿತ್ತು. ಆದರೆ, ವಿಮಾನ Al-171 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಾಸ್‌ಕುಮಾರ್ ಬುಚರ್ವಾಡ ಭೀಕರ ಅಪಘಾತದಿಂದ ಪವಾಡಸದೃಶವಾಗಿ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನ ಪತನದ ಸಮಯದಲ್ಲಿ ಸೀಟ್ ನಂಬರ್ 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ವರದಿಯಾಗಿದೆ.

ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್‌ ಆಯುಕ್ತ ಜಿ.ಎಸ್. ಮಲಿಕ್ ಕೂಡ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪೊಲೀಸರು IIA ಸೀಟಿನಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಬದುಕುಳಿದ ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮಲಿಕ್ ಹೇಳಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

4 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…

2 days ago