ಅಹಮದಾಬಾದ್ ವಿಮಾನ ದುರಂತ: ಭೀಕರ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ ಓರ್ವ ಪ್ರಯಾಣಿಕ

ಅಹ್ಮದಾಬಾದ್ ನಲ್ಲಿಂದು ಪತನವಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಯಾರೂ ಉಳಿದಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿತ್ತು. ಆದರೆ, ವಿಮಾನ Al-171 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಾಸ್‌ಕುಮಾರ್ ಬುಚರ್ವಾಡ ಭೀಕರ ಅಪಘಾತದಿಂದ ಪವಾಡಸದೃಶವಾಗಿ ಬದುಕುಳಿದಿದ್ದಾರೆ ಎಂದು ತಿಳಿದುಬಂದಿದೆ.

ವಿಮಾನ ಪತನದ ಸಮಯದಲ್ಲಿ ಸೀಟ್ ನಂಬರ್ 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆಂದು ವರದಿಯಾಗಿದೆ.

ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್‌ ಆಯುಕ್ತ ಜಿ.ಎಸ್. ಮಲಿಕ್ ಕೂಡ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಪೊಲೀಸರು IIA ಸೀಟಿನಲ್ಲಿ ಬದುಕುಳಿದ ಒಬ್ಬ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. ಬದುಕುಳಿದ ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾವಿನ ಸಂಖ್ಯೆಯ ಬಗ್ಗೆ ಇನ್ನೂ ಏನನ್ನೂ ಹೇಳಲು ಸಾಧ್ಯವಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮಲಿಕ್ ಹೇಳಿದ್ದಾರೆ.

Ramesh Babu

Journalist

Recent Posts

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 minutes ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

11 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago