ಅ.13 ರಂದು ಮಹಿಳೆಯರಿಗೆ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರ ವತಿಯಿಂದ 01 ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ ದಿನಾಂಕ 13-10-2023 ರಂದು ಸಾಮರ್ಥ್ಯ ಸೌಧ, ತಾಲ್ಲೂಕು ಪಂಚಾಯ್ತಿ, ದೊಡ್ಡಬಳ್ಳಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮವು ಸುಮಾರು 60 ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.

ಕಾರ್ಯಕ್ರಮವು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಕಾರ್ಯಕ್ರಮಕ್ಕೆ ಭಾಗಿಯಾದ ಅಭ್ಯರ್ಥಿಗಳಿಗೆ ಟೀ, ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ :

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕೊಠಡಿ ಸಂಖ್ಯೆ: 132, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ : 7760816038
ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

58 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago