ಅ.14 ಮತ್ತು15ರಂದು ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.

ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ‌ ಶಿಬಿರಾರ್ಥಿಗಳು‌ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು‌ ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ‌. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ‌ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.

ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

View Comments

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

51 minutes ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

7 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

9 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

9 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

10 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

21 hours ago