ಅ.14 ಮತ್ತು15ರಂದು ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.

ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ‌ ಶಿಬಿರಾರ್ಥಿಗಳು‌ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು‌ ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ‌. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ‌ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.

ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

View Comments

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

10 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

10 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

14 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

16 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

19 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

24 hours ago