ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.
ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ ಶಿಬಿರಾರ್ಥಿಗಳು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.
ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
View Comments
Thank you sir