ಅ.14 ಮತ್ತು15ರಂದು ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.

ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ‌ ಶಿಬಿರಾರ್ಥಿಗಳು‌ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು‌ ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ‌. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ‌ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.

ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

View Comments

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

14 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

17 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago