ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ಅಕ್ಟೋಬರ್ 14 ಮತ್ತು 15ರಂದು ಎರಡು ದಿನಗಳ ಕಾಲ ನಾನೂ ನಾಯಕ ಎಂಬ ರಾಜ್ಯ ಮಟ್ಟದ ನಾಯಕತ್ವ ಶಿಬರವನ್ನ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪ್ ನಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಮಾಹಿತಿ ನೀಡಿದರು.
ನಗರದ ಪರಿಷತ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.14ರ ಬೆಳಗ್ಗೆ 10:30ಕ್ಕೆ ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಎ.ಎಸ್ ಕಿರಣ್ ಕುಮಾರ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಧೀರಜ್ ಮುನಿರಾಜ್, ಉಚ್ಛ ನಾಯ್ಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ನಾಗಮೋಹನದಾಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಶಿಬಿರದಲ್ಲಿ ಪಾಲ್ಗೊಳ್ಳಲು ಈಗಾಗಲೇ ಸುಮಾರು 670 ಮಂದಿ ಶಿಬಿರಾರ್ಥಿಗಳು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ, ಅ.14ರಂದು ಸಂಸ್ಥೆ ಬೆಳವಣಿಗೆ, ವ್ಯಕ್ತಿತ್ವ ವಿಕಸನ, ನನ್ನೊಳಗಿನ ನಾನು, ಮನಸ್ಸು ಮತ್ತು ಸಂಘಟನೆ, ಪರಿಷತ್-ಧ್ಯೇಯ, ಬೆಳವಣಿಗೆ , ಉತ್ಸಾಹ, ಯಶಸ್ಸು, ಕಾಯಕದ ಪ್ರಸ್ತುತತೆ, ಪರಿಷತ್ತಿನ ಮುಂದಿನ ಗುರಿ, ಬಲವರ್ದನೆ, ಅಮೃತಾ ಅಮಾವಾಸ್ಯೆ. ಅ.15ರಂದು ದೇಹ- ಆರೋಗ್ಯ, ಸಮೂಹ ಮಾಧ್ಯಮ ಚಿತ್ತ ಎತ್ತ?, ನಾನೂ ಮಹಿಳೆ ನನ್ನ ನಡಿಗೆ ಎತ್ತ? ಸೇರಿದಂತೆ ಇತರೆ ವಿಷಯಗಳ ಬಗ್ಗೆ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ಯಿಗಳಿಂದ ಮಾಹಿತಿ ಒದಗಿಸಲಾಗುವುದು ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವಿಜ್ಞಾನವನ್ನ ಜನಸಾಮಾನ್ಯರಿಗೆ ತಲುಪಿಸಲು ಸಲುವಾಗಿ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದ ಆರ್.ರವಿ ಬಿಳಿಶಿವಾಲೆ ಅವರು ನೀಡಿದ ಹತ್ತು ಎಕರೆ ಜಮೀನಿನಲ್ಲಿ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ, ಈ ವಿಜ್ಞಾನ ಗ್ರಾಮ ನಿರ್ಮಾಣ ಕಾರ್ಯಕ್ಕೆ ಲೋಕೋಪಯೋಗಿ ಇಲಾಖಾ ವತಿಯಿಂದ 5 ಕೋಟಿ ಹಣ ಮಂಜೂರಾಗಿದೆ ಎಂದು ತಿಳಿಸಿದರು.
ಈ ವೇಳೆ ಉಪಾಧ್ಯಕ್ಷ ರಾಮಚಂದ್ರ, ಲೆಕ್ಕಪರಿಶೋಧಕ ಲಕ್ಷ್ಮಿನಾರಾಯಣ, ಮಂಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
View Comments
Thank you sir