ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ದಿವಂಗತ ಆರ್.ಎಲ್.ಜಾಲಪ್ಪ ಅವರ 98ನೇ ಜನ್ಮದಿನಾಚರಣೆ ಅಕ್ಟೋಬರ್ 19ರಂದು ನಡೆಯಲಿದ್ದು, ಇದರ ಅಂಗವಾಗಿ ಅ.16ರ ಸೋಮವಾರ ಬೆಳಗ್ಗೆ ದೊಡ್ಡಬಳ್ಳಾಪುರದ ಆರ್ಎಲ್ಜೆಐಟಿ ಕ್ಯಾಂಪಸ್ನ ಆರ್.ಎಲ್.ಜಾಲಪ್ಪ ಕಲಾ ಮಂದಿರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದ್ದಾರೆ.
ಕೋಲಾರದ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಸಮುದಾಯ ವೈದ್ಯಶಾಸ್ತ್ರ ವಿಭಾಗ, ಶ್ರೀ ದೇವರಾಜ ಅರಸ್ ವೈದ್ಯಕೀಯ ಮಹಾವಿದ್ಯಾಲಯ, ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಅಕ್ಷಯ ಲಿಯೋ ಕ್ಲಬ್ಗಳ ಸಹಯೋಗದಲ್ಲಿ ಶಿಬಿರ ನಡೆಯಲಿದ್ದು, ಹೃದಯದ ತೊಂದರೆ, ಮೂತ್ರಪಿಂಡ, ಶ್ವಾಸಕೋಶ, ಸ್ತ್ರೀ ರೋಗ, ಮಕ್ಕಳ ಆರೋಗ್ಯ, ಕಿವಿ ಮತ್ತು ಗಂಟಲು, ಕಣ್ಣು, ಚರ್ಮ, ದಂತ, ಮಧುಮೇಹ, ಮೂಳೆ ಮತ್ತು ಕೀಲು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಆರೋಗ್ಯ ಸಲಹೆ ಮತ್ತು ಔಷಧ ವಿತರಣೆ ನಡೆಯಲಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಲು ನಿಗದಿತ ದಿನಾಂಕದಂದು ಉಚಿತ ವಾಹನ ವ್ಯವಸ್ಥೆಯನ್ನೂ ಮಾಡಲಾಗಿದೆ.
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…