ಅ.19ರಂದು ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇದೇ 19ರಂದು ಭಾನುವಾರ ಇಲ್ಲಿನ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.

ಇಲ್ಲಿನ ಆರ್‌ಎಲ್‌ಜೆಐಟಿ ಸಭಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ ಕಟ್ಟಡವನ್ನೂ ಅವರು ಉದ್ಘಾಟಿಸಲಿದ್ದಾರೆ. ಪ್ರೊ.ರವಿಕಿರಣ್‌ ಕೆ.ಆರ್ ಅವರು ಬರೆದಿರುವ “ನೇರ ನಿಷ್ಠುರ ನಡೆಯ ಹೃದಯವಂತ ಆರ್.ಎಲ್.ಜಾಲಪ್ಪ ಜೀವನ ಪಥ” ಪುಸ್ತಕವನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆ ಮಾಡಲಿದ್ದಾರೆ ಎಂದು ವಿವರಿಸಿದರು.

ವಿವಿಧ ಕಟ್ಟಡಗಳ ಉದ್ಘಾಟನೆ, ಶಿಲಾನ್ಯಾಸ:

ಜಾಲಪ್ಪ ಜನ್ಮ ಶತಮಾನೋತ್ಸವ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಶಿಲಾನ್ಯಾಸ ನೆರವೇರಿಸಲಿದ್ದು, ಶ್ರೀ ದೇವರಾಜ ಅರಸ್‌ ಅಂತಾರಾಷ್ಟ್ರೀಯ ವಸತಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಹೇಳಿದರು.

*ವೆಂಕಟಾಚಲಯ್ಯಗೆ ಪುರಸ್ಕಾರ:*

ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಅವರಿಗೆ ಆರ್.ಎಲ್.ಜಾಲಪ್ಪ ಜನ್ಮಶತಮಾನೋತ್ಸವ ಪುರಸ್ಕಾರ ನೀಡಲಾಗುತ್ತಿದೆ. ಜೊತೆಗೆ ಸುಮಾರು 30ಕ್ಕೂ ಹೆಚ್ಚು ಹಿರಿಯ ಗಣ್ಯರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿಸಿದರು.

*ಪುಸ್ತಕದ ಕನಸು ನನಸು:*

ಜಾಲಪ್ಪನವರು ಬದುಕಿದ್ದ ಕಾಲದಲ್ಲೇ ಅವರ ಕುರಿತು ಪುಸ್ತಕವೊಂದನ್ನು ಬರೆಸಬೇಕೆಂಬ ಆಕಾಂಕ್ಷೆ ಇತ್ತು. ಆದರೆ ಅವರು ಒಪ್ಪಿರಲಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಒಮ್ಮೆ ಮನೆಗೆ ಬಂದಾಗಲೂ ಈ ಬಗ್ಗೆ ಹೇಳಿದ್ದರು. ಜಾಲಪ್ಪ ಅವರ ನಿಧನದ ಬಳಿಕ, ಆರಂಭಗೊಂಡ ಪ್ರಕ್ರಿಯೆ ಇದೀಗ ಕೈಗೂಡಿದ್ದು, ಅವರ ಜನ್ಮ ಶತಮಾನೋತ್ಸವ ಸಂದರ್ಭದಲ್ಲೇ ಜೀವನ ಗಾಥೆ ಬಿಡುಗಡೆಗೊಳ್ಳುತ್ತಿದೆ. ಪುಸ್ತಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುನ್ನಡಿ ಬರೆದಿರುವುದು ವಿಶೇಷ ಎಂದು ತಿಳಿಸಿದರು.

*ಕಾಲೇಜು ರಜತ ಮಹೋತ್ಸವ:*

ಅ.17 ಮತ್ತು 18ರಂದು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳ ಬೆಳ್ಳಿ ಹಬ್ಬ ನಡೆಯಲಿದ್ದು, ಶುಕ್ರವಾರ 17ರಂದು ನಡೆಯುವ ಘಟಿಕೋತ್ಸವದಲ್ಲಿ ವಿಜ್ಞಾನಿ, ಐಐಎಸ್ಸಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಪಿ.ಜೆ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. 18ರಂದು ಶನಿವಾರ ನಡೆಯುವ ಬೆಳ್ಳಿ ಹಬ್ಬದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್‌.ವಿದ್ಯಾಶಂಕರ್‌, ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಮತ್ತಿತರರು ಭಾಗವಹಿಸುವರು. ಅಂದು ಸಂಜೆ ಪ್ರಸಿದ್ದ ಗಾಯಕಿ ಅನುರಾಧಾ ಭಟ್‌ ಹಾಗೂ ಗಾಯಕ ಕಂಬದ ರಂಗಯ್ಯ ತಂಡದಿಂದ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಸಂಸ್ಥೆಯ ಅಧ್ಯಕ್ಷ ಜಿ.ಎಚ್.ನಾಗರಾಜ ಮತ್ತು ಕಾರ್ಯದರ್ಶಿ ಕೆ.ಜಿ.ಹನುಮಂತರಾಜು ಅವರ ಮಾರ್ಗದರ್ಶನದಲ್ಲಿ ಸಿದ್ದತೆಗಳು ನಡೆದಿವೆ ಎಂದು ತಿಳಿಸಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್‌, ಲಯನ್ಸ್ ಕ್ಲಬ್‌ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬು ರೆಡ್ಡಿ, ಉಪಪ್ರಾಂಶುಪಾಲ ಡಾ.ಶಿವಪ್ರಸಾದ್‌, ಡೀನ್ ಡಾ.ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

24 minutes ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

32 minutes ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

2 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

3 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

5 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

11 hours ago