ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…