ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…