ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6 ರಿಂದ 8ನೇ ತರಗತಿ) ನೇಮಕಾತಿ-2022ರ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ https://schooleducation.karnataka.gov.in ನಲ್ಲಿ ಅ.19ರಂದು ಪ್ರಕಟಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ನ್ನು ಅಕ್ಟೋಬರ್ 21 ರಿಂದ ಬೆಳಿಗ್ಗೆ 10.30 ಗಂಟೆಯಿಂದ (ನ್ಯಾಯಾಲಯ ಪ್ರಕರಣಗಳು ಹೊರತುಪಡಿಸಿ) ನೇಮಕಾತಿ ಪ್ರಾಧಿಕಾರಿಯಾದ ಉಪನಿರ್ದೇಶರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಠಡಿ ಸಂಖ್ಯೆ :126, ಮೊದಲನೇ ಮಹಡಿ ಜಿಲ್ಲಾಡಳಿತ ಭವನ, ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಇಲ್ಲಿ ನಡೆಸಲಾಗುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿರುವಂತೆ ಎಲ್ಲಾ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಸೂಚಿಸಿದ ಕೌನ್ಸಿಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.
ತಡವಾಗಿ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳಿಗೆ ಬದ್ಧರಾಗಬೇಕಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…