ಅ.22ರ ಭಾನುವಾರ ಬೆಳಗ್ಗೆ 10ಕ್ಕೆ ನಗರದ ಕನ್ನಡ ಜಾಗೃತ ಭವನದಲ್ಲಿ ದ್ರಾವಿಡ ಸಂಸ್ಕೃತಿಯ ಮಹರಾಜ ಮಹಾದೇವ ಹರಹಂತ ಮಹಿಷ ಉತ್ಸವವನ್ನ ಏರ್ಪಡಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ಪ್ರೊ.ವಿಠಲ್ ವಗ್ಗನ್ ಅವರು ಭಾಗವಹಿಸಿ ಮಹಿಷನ ಇತಿಹಾಸ ಕುರಿತು ಮಾತನಾಡಲಿದ್ದಾರೆ ಎಂದರು.
ಆಯಾ ಜಾತಿ ಜನಾಂಗಗಳ ಸಾಂಸ್ಕೃತಿಕ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಯಾರ ವಿರುದ್ಧವೂ ಈ ಆಚರಣೆಯನ್ನು ಮಾಡುತ್ತಿಲ್ಲ, ನಮ್ಮ ದ್ರಾವಿಡ ಅಸ್ಮಿತೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಲು ಮಾಡುತ್ತಿದ್ದೇವೆ ಎಂದರು.
ಮಹಿಷನ ಚರಿತ್ರೆಯನ್ನ ಅರಿತ ದ್ರಾವಿಡ ಸಂತತಿಯ ಪ್ರಗತಿಪರರು, ಚಿಂತಕರು, ಡಾ.ಬಿ.ಆರ್.ಅಂಬೇಡ್ಕರ್, ಬುದ್ದನ ಅನುಯಾಯಿಗಳು ಮೈಸೂರಿನಲ್ಲಿ ಕಳೆದ 40ವರ್ಷಗಳಿಂದಲೂ ಮಹಿಷ ಉತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಈ ನಡುವೆ ದ್ರಾವಿಡರ ಅಸ್ಮಿತೆಯನ್ನು ಗೌರವಿಸದ ಮನುವಾದಿಗಳು ನೇರವಾಗಿ ಯುದ್ಧಕ್ಕೆ ಇಳಿಯದೆ ಶೂದ್ರರನ್ನು ಅಖಾಡಕ್ಕೆ ತರುತ್ತಿದ್ದಾರೆ. ವೈದಿಕರ ರಾಜಕೀಯ ಆಶ್ರಯದಲ್ಲಿ ಕುಳಿತಿರುವ ಇಂಥವರು ದ್ರಾವಿಡ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ಅಂತಹ ಎಲ್ಲ ಅಡೆತಡೆಗಳನ್ನು ನಿವಾರಿಸುವ ಶಕ್ತಿ ದ್ರಾವಿಡರಿಗೆ ಇದೆ. ವಿರೋಧಿಸುವುದು ಆರಂಭವೂ ಅಲ್ಲ, ಅಂತ್ಯವೂ ಅಲ್ಲ, ಅಂತಹ ವಿರೋಧಿಗಳನ್ನು ಎದುರಿಸಿ ನಿಲ್ಲುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ನಮ್ಮ ಸಮಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಮಹಿಷ ಉತ್ಸವ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ನಮ್ಮ ಜನಾಂಗಗಳು ಸುಶಿಕ್ಷಿತರಾಗಿದ್ದಾರೆ, ಸರಿ ತಪ್ಪುಗಳ ವಿವೇಚನೆಯ ಅರಿವಾಗಿದೆ, ಹಾಗಾಗಿ ಶೂದ್ರ ಮತ್ತು ಮೂಲ ನಿವಾಸಿಗಳ ಇತಿಹಾಸ ತಿಳಿಸಿಕೊಡುವ ಸಲುವಾಗಿ ಈ ಉತ್ಸವ ಆಚರಣೆ ಮಾಡುತ್ತಿದ್ದೇವೆ ಎಂದರು.
ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಗುರುರಾಜಪ್ಪ, ವಕೀಲರಾದ ಎಸ್.ಡಿ.ಮುನಿರಾಜು, ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ.ಯು, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಪತ್ರಕರ್ತ ರಾಜುಸಣ್ಣಕ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…