ಅ.22ರಂದು ನಗರದಲ್ಲಿ ಮಹಿಷ ಉತ್ಸವ ಆಚರಣೆ

ಅ.22ರ ಭಾನುವಾರ ಬೆಳಗ್ಗೆ 10ಕ್ಕೆ ನಗರದ ಕನ್ನಡ ಜಾಗೃತ ಭವನದಲ್ಲಿ ದ್ರಾವಿಡ ಸಂಸ್ಕೃತಿಯ ಮಹರಾಜ ಮಹಾದೇವ ಹರಹಂತ‌ ಮಹಿಷ ಉತ್ಸವವನ್ನ ಏರ್ಪಡಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ಪ್ರೊ.ವಿಠಲ್ ವಗ್ಗನ್ ಅವರು ಭಾಗವಹಿಸಿ ಮಹಿಷನ ಇತಿಹಾಸ ಕುರಿತು ಮಾತನಾಡಲಿದ್ದಾರೆ ಎಂದರು.

ಆಯಾ ಜಾತಿ ಜನಾಂಗಗಳ ಸಾಂಸ್ಕೃತಿಕ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಯಾರ ವಿರುದ್ಧವೂ ಈ ಆಚರಣೆಯನ್ನು ಮಾಡುತ್ತಿಲ್ಲ, ನಮ್ಮ ದ್ರಾವಿಡ ಅಸ್ಮಿತೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಲು ಮಾಡುತ್ತಿದ್ದೇವೆ ಎಂದರು.

ಮಹಿಷನ ಚರಿತ್ರೆಯನ್ನ ಅರಿತ ದ್ರಾವಿಡ ಸಂತತಿಯ ಪ್ರಗತಿಪರರು, ಚಿಂತಕರು, ಡಾ.ಬಿ.ಆರ್.ಅಂಬೇಡ್ಕರ್, ಬುದ್ದನ ಅನುಯಾಯಿಗಳು ಮೈಸೂರಿನಲ್ಲಿ ಕಳೆದ 40ವರ್ಷಗಳಿಂದಲೂ ಮಹಿಷ ಉತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಈ ನಡುವೆ ದ್ರಾವಿಡರ ಅಸ್ಮಿತೆಯನ್ನು ಗೌರವಿಸದ ಮನುವಾದಿಗಳು ನೇರವಾಗಿ ಯುದ್ಧಕ್ಕೆ ಇಳಿಯದೆ ಶೂದ್ರರನ್ನು ಅಖಾಡಕ್ಕೆ ತರುತ್ತಿದ್ದಾರೆ.  ವೈದಿಕರ ರಾಜಕೀಯ ಆಶ್ರಯದಲ್ಲಿ ಕುಳಿತಿರುವ ಇಂಥವರು ದ್ರಾವಿಡ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ.  ಅಂತಹ ಎಲ್ಲ ಅಡೆತಡೆಗಳನ್ನು ನಿವಾರಿಸುವ ಶಕ್ತಿ ದ್ರಾವಿಡರಿಗೆ ಇದೆ.  ವಿರೋಧಿಸುವುದು ಆರಂಭವೂ ಅಲ್ಲ, ಅಂತ್ಯವೂ ಅಲ್ಲ, ಅಂತಹ ವಿರೋಧಿಗಳನ್ನು ಎದುರಿಸಿ ನಿಲ್ಲುವ ಜವಾಬ್ದಾರಿ ನಮ್ಮ ಮೇಲಿದೆ.  ಹಾಗಾಗಿ ನಮ್ಮ ಸಮಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಮಹಿಷ ಉತ್ಸವ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ನಮ್ಮ ಜನಾಂಗಗಳು ಸುಶಿಕ್ಷಿತರಾಗಿದ್ದಾರೆ, ಸರಿ ತಪ್ಪುಗಳ ವಿವೇಚನೆಯ ಅರಿವಾಗಿದೆ, ಹಾಗಾಗಿ ಶೂದ್ರ ಮತ್ತು ಮೂಲ ನಿವಾಸಿಗಳ ಇತಿಹಾಸ ತಿಳಿಸಿಕೊಡುವ ಸಲುವಾಗಿ ಈ ಉತ್ಸವ ಆಚರಣೆ ಮಾಡುತ್ತಿದ್ದೇವೆ ಎಂದರು.

ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಗುರುರಾಜಪ್ಪ, ವಕೀಲರಾದ ಎಸ್.ಡಿ.ಮುನಿರಾಜು, ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ.ಯು, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಪತ್ರಕರ್ತ ರಾಜುಸಣ್ಣಕ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 hour ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

14 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

18 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

18 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

21 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago