ಅ.22ರ ಭಾನುವಾರ ಬೆಳಗ್ಗೆ 10ಕ್ಕೆ ನಗರದ ಕನ್ನಡ ಜಾಗೃತ ಭವನದಲ್ಲಿ ದ್ರಾವಿಡ ಸಂಸ್ಕೃತಿಯ ಮಹರಾಜ ಮಹಾದೇವ ಹರಹಂತ ಮಹಿಷ ಉತ್ಸವವನ್ನ ಏರ್ಪಡಿಸಲಾಗಿದೆ ಎಂದು ದಲಿತ ವಿಮೋಚನಾ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಹೇಳಿದರು.
ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರಾದ ಪ್ರೊ.ವಿಠಲ್ ವಗ್ಗನ್ ಅವರು ಭಾಗವಹಿಸಿ ಮಹಿಷನ ಇತಿಹಾಸ ಕುರಿತು ಮಾತನಾಡಲಿದ್ದಾರೆ ಎಂದರು.
ಆಯಾ ಜಾತಿ ಜನಾಂಗಗಳ ಸಾಂಸ್ಕೃತಿಕ ಆಚರಣೆಗೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಯಾರ ವಿರುದ್ಧವೂ ಈ ಆಚರಣೆಯನ್ನು ಮಾಡುತ್ತಿಲ್ಲ, ನಮ್ಮ ದ್ರಾವಿಡ ಅಸ್ಮಿತೆಯ ಬಗ್ಗೆ ಯುವಕರಲ್ಲಿ ಅರಿವು ಮೂಡಿಸಲು ಮಾಡುತ್ತಿದ್ದೇವೆ ಎಂದರು.
ಮಹಿಷನ ಚರಿತ್ರೆಯನ್ನ ಅರಿತ ದ್ರಾವಿಡ ಸಂತತಿಯ ಪ್ರಗತಿಪರರು, ಚಿಂತಕರು, ಡಾ.ಬಿ.ಆರ್.ಅಂಬೇಡ್ಕರ್, ಬುದ್ದನ ಅನುಯಾಯಿಗಳು ಮೈಸೂರಿನಲ್ಲಿ ಕಳೆದ 40ವರ್ಷಗಳಿಂದಲೂ ಮಹಿಷ ಉತ್ಸವ ಆಚರಿಸಿಕೊಂಡು ಬರುತ್ತಿದ್ದಾರೆ. ಈ ನಡುವೆ ದ್ರಾವಿಡರ ಅಸ್ಮಿತೆಯನ್ನು ಗೌರವಿಸದ ಮನುವಾದಿಗಳು ನೇರವಾಗಿ ಯುದ್ಧಕ್ಕೆ ಇಳಿಯದೆ ಶೂದ್ರರನ್ನು ಅಖಾಡಕ್ಕೆ ತರುತ್ತಿದ್ದಾರೆ. ವೈದಿಕರ ರಾಜಕೀಯ ಆಶ್ರಯದಲ್ಲಿ ಕುಳಿತಿರುವ ಇಂಥವರು ದ್ರಾವಿಡ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡುತ್ತಿದ್ದಾರೆ. ಅಂತಹ ಎಲ್ಲ ಅಡೆತಡೆಗಳನ್ನು ನಿವಾರಿಸುವ ಶಕ್ತಿ ದ್ರಾವಿಡರಿಗೆ ಇದೆ. ವಿರೋಧಿಸುವುದು ಆರಂಭವೂ ಅಲ್ಲ, ಅಂತ್ಯವೂ ಅಲ್ಲ, ಅಂತಹ ವಿರೋಧಿಗಳನ್ನು ಎದುರಿಸಿ ನಿಲ್ಲುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ನಮ್ಮ ಸಮಿತಿಯಿಂದ ದೊಡ್ಡಬಳ್ಳಾಪುರದಲ್ಲಿ ಮಹಿಷ ಉತ್ಸವ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ ನಮ್ಮ ಜನಾಂಗಗಳು ಸುಶಿಕ್ಷಿತರಾಗಿದ್ದಾರೆ, ಸರಿ ತಪ್ಪುಗಳ ವಿವೇಚನೆಯ ಅರಿವಾಗಿದೆ, ಹಾಗಾಗಿ ಶೂದ್ರ ಮತ್ತು ಮೂಲ ನಿವಾಸಿಗಳ ಇತಿಹಾಸ ತಿಳಿಸಿಕೊಡುವ ಸಲುವಾಗಿ ಈ ಉತ್ಸವ ಆಚರಣೆ ಮಾಡುತ್ತಿದ್ದೇವೆ ಎಂದರು.
ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಗುರುರಾಜಪ್ಪ, ವಕೀಲರಾದ ಎಸ್.ಡಿ.ಮುನಿರಾಜು, ಬೆಂ.ಗ್ರಾ, ಎಸ್.ಟಿ.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುನಿಕೃಷ್ಣಪ್ಪ.ಯು, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಪತ್ರಕರ್ತ ರಾಜುಸಣ್ಣಕ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…