ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.
ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.
ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ, ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.
ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ…
ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೋಟಿ ಕೋಟಿ ಮೌಲ್ಯದ…
ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ…
ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ…
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…