ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.
ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.
ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ, ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…