Categories: ಕೋಲಾರ

ಅ.23ರಂದು ಹೊಳಲಿ ಬಳಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್‌ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.

ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು‌ ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.

ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ,‌ ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

9 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

10 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

11 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

14 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

14 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

1 day ago