ಕೋಲಾರ: ಜಿಲ್ಲೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಬಹುದಿನಗಳ ಬೇಡಿಕೆಯಾದ ಕ್ರೀಡಾಂಗಣಕ್ಕೆ ಅ.23 ರಂದು ಬುಧವಾರ ತಾಲೂಕಿನ ಹೊಳಲಿ ಗ್ರಾಮದ ಬಳಿ ಗುದ್ದಲಿ ಪೂಜೆ ನಡೆಯಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮಕ್ಕೆ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕ್ರೀಡಾಪಟು ಓಂಶಕ್ತಿ ಚಲಪತಿ ತಿಳಿಸಿದರು,
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕ್ರಿಕೆಟ್ ಕ್ರೀಡಾಂಗಣವಾದರೆ ಸ್ಥಳೀಯ ಪ್ರತಿಭೆಗಳಿಗೂ ಸಹ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಅವಕಾಶಗಳು ಸಿಗಲಿವೆ ಇದಕ್ಕೆ ಈಗಾಗಲೇ ಜಿಲ್ಲಾಡಳಿತವು ೧೬ ಎಕರೆಯನ್ನು ಮಂಜೂರು ಮಾಡಲಾಗಿದೆ ಇನ್ನೂ ೧೨ ಎಕರೆ ಅವಶ್ಯಕತೆ ಇದ್ದು ಸರಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ ಇದಕ್ಕೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಜನಪ್ರತಿನಿಧಿಗಳ ಸಹಕಾರವಿದೆ ಎಂದರು.
ಈ ವೇದಿಕೆಯಲ್ಲಿ ಇರುವವರು ಸುಮಾರು 35 ವರ್ಷಗಳಿಂದ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಆಗಿನಿಂದ ಕ್ರಿಕೆಟ್ ಮೈದಾನದ ಕನಸಾಗಿದೆ ನಮಗೆ ಸಿಗದ ಅವಕಾಶವು ಮುಂದಿನ ಪೀಳಿಗೆಗೆ ಆದರೂ ಸಿಗಲಿ ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಸಮನ್ವಯ ಸದಸ್ಯ ಆಯಿಲ್ ರಮೇಶ್ ಮಾತನಾಡಿ ಈ ಕ್ರೀಡಾಂಗಣಕ್ಕೆ ಬಹಳ ವರ್ಷಗಳಿಂದ ಹೋರಾಟ ನಡೆಸಿದ್ದೇವೆ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿವೆ ಅವಕಾಶ ಸಿಗಬೇಕು ಹೀಗಾಗಿಯೇ ಎಲ್ಲಾ ಜಿಲ್ಲೆಗಳಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಈಗಾಗಲೇ ಸುಮಾರು 8 ಜಿಲ್ಲೆಗಳಲ್ಲಿ ಅಂತಹ ಪ್ರಯತ್ನಗಳು ನಡೆದಿವೆ ಎಂದರು.
ಕೋಲಾರದಲ್ಲಿ ಪ್ರಾರಂಭವಾಗಲಿರುವ ಕ್ರೀಡಾಂಗಣದಲ್ಲಿ ನಾಲ್ಕು ಮೈದಾನಗಳು ಇದ್ದು ಇಲ್ಲಿಯೇ ಲೀಗ್ ಟೂರ್ನಿ ಸಹ ನಡೆಯಲಿದೆ ನಾವು ಹಿಂದೆ ಅನುಭವಿಸಿದ ಕಷ್ಟ ಗೊತ್ತಿದೆ ಅಂತರರಾಷ್ಟ್ರೀಯ ದರ್ಜೆಯ ಸೌಲಭ್ಯ ಸಿಗಬೇಕು ಜೊತೆಗೆ ಆಸಕ್ತರಿಗೆ ಅಭ್ಯಾಸ ನಡೆಸಲು ಅನುಕೂಲವಾಗುವಂತೆ ಮಾಡಲಾಗುತ್ತದೆ ಎಲ್ಲಾ ಉಚಿತವಿರಲಿದ್ದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.
ಈ ಸಂದರ್ಭದಲ್ಲಿ ಕೆಸಿಎ ಸದಸ್ಯ ವಿಜಯ ಸಾಗರ್ ಶೆಟ್ಟಿ, ಕ್ರೀಡಾಪಟುಗಳಾದ ಪುಟ್ಟಸ್ವಾಮಿ, ರಘುರಾಮ್ ಅಡಿಗ, ಕಿಟ್ಟಿ, ಪ್ರಸನ್ನ, ಶಿವು, ಚಂದ್ರಶೇಖರ್, ಉಲ್ಲಾಸ್, ಮಂಜುನಾಥ್ ಹಾಗೂ ಕ್ರಿಕೆಟಿಗರು ಇದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…